25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಾಲಾಡಿ : ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

ಮಾಲಾಡಿ : ಇಲ್ಲಿಯ ಗ್ರಾಮ ಪಂಚಾಯತದ 2023-24ನೇ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.22ರಂದು ಗ್ರಾಮ ಪಂಚಾಯತ್ ಅಧ್ಯಕ್ಷ ಪುನೀತ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಾಮಾಜಿಕ ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ವಿದ್ಯಾ ಪಿ.ಡಿ ರವರು ಭಾಗವಹಿಸಿ ಗ್ರಾಮ ಸಭೆಯನ್ನು ಮುನ್ನಡೆಸಿದರು.

‘ಒಂದು ಹೆಜ್ಜೆ ಸ್ವಚ್ಛತೆಯೆಡೆಗೆ’ ರಸ್ತೆ ಬದಿಗಳಲ್ಲಿ ಕಸ ಹಾಕುವವರ ವಿರುದ್ಧ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿ ಕಾಲೇಜು ವಿದ್ಯಾರ್ಥಿಯೋರ್ವಳು ಪಂಚಾಯತ್ ಗೆ ಆಗ್ರಹಿಸಿದಳು.
ದೇಜಪ್ಪ ಮೂಲ್ಯರ ಮನೆ ಬಳಿ ತಂತಿಗಳು ಜೋತು ಬಿದ್ದಿದ್ದು ಸರಿಪಡಿಸುವಂತೆ ಮೆಸ್ಕಾಂ ಇಲಾಖೆ ಗೆ ಗ್ರಾಮಸ್ಥರು ಮನವಿ ಮಾಡಿದರು. ಸೋಣಂದೂರು ಅಂಗನವಾಡಿ ಬಳಿ ಹಳೆ ಬಾವಿವಿದ್ದು ಅದನ್ನು ಮುಚ್ಚುವಂತೆ ಮನವಿ ಮಾಡಲಾಯಿತು.

ಮಾರ್ಗದರ್ಶಿ ಅಧಿಕಾರಿ ಮಾತನಾಡಿ ಗ್ರಾಮ ಸಭೆಯು ಆರೋಗ್ಯಕರವಾದಂತಹ ವಿಚಾರದ ಕುರಿತಾಗಿ ಉತ್ತಮವಾಗಿ ನಡೆಯಿತು ಎಂದು ಹೇಳಿದರು.

ಉಪಾಧ್ಯಕ್ಷರಾದ ಶ್ರೀಮತಿ ಸೆಲೆಸ್ಟಿನ್ ಡಿಸೋಜ, ಸದಸ್ಯರಾದ ಎಸ್ ಬೇಬಿ ಸುವರ್ಣ, ಶ್ರೀಮತಿ ಸುಸ್ಸಾನ, ದಿನೇಶ್ ಡಿ. ಕರ್ಕೇರ, ಕೆ ಸುಧಾಕರ ಆಳ್ವ, ಉಮೇಶ್, ಬೆನಡಿಕ್ಟ್ ಮಿರಾಂದ, ವಸಂತ ಪೂಜಾರಿ, ಶ್ರೀಮತಿ ಜಯಂತಿ, ಶ್ರೀಮತಿ ತುಳಸಿ ಬಿ, ರಾಜೇಶ್, ಶ್ರೀಮತಿ ಫರ್ಜನಾ, ಶ್ರೀಮತಿ ವಿದ್ಯಾ ಪಿ. ಸಾಲಿಯಾನ್, ಶ್ರೀಮತಿ ಗುಲಾಬಿ, ಶ್ರೀಮತಿ ಐರಿನ್ ಮೋರಾಸ್, ದಿನೇಶ್, ಶ್ರೀಮತಿ ರುಬೀನಾ, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ರೈ ಸ್ವಾಗತಿಸಿ, ಅನುಪಾಲನ ವರದಿ ವಾಚಿಸಿ, ಧನ್ಯವಾದವಿತ್ತರು.

Related posts

ನಡ ಗ್ರಾ.ಪಂ. ಗ್ರಾಮಸಭೆ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಉದ್ಯಮಿ ಪ್ರಜಿತ್ ಜೈನ್ ರಿಂದ ಸ್ಟ್ಯಾಂಡ್ ಫ್ಯಾನ್ ನ್ನು ಕೊಡುಗೆ

Suddi Udaya

ಕೊಕ್ಕಡ : ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ

Suddi Udaya

ಅಂಡಿಂಜೆ: ಮಲೆರೊಟ್ಟು ನಿವಾಸಿ ಬಾಬು ಪೂಜಾರಿ ನಿಧನ

Suddi Udaya
error: Content is protected !!