23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಾಲಾಡಿ : ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

ಮಾಲಾಡಿ : ಇಲ್ಲಿಯ ಗ್ರಾಮ ಪಂಚಾಯತದ 2023-24ನೇ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.22ರಂದು ಗ್ರಾಮ ಪಂಚಾಯತ್ ಅಧ್ಯಕ್ಷ ಪುನೀತ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಾಮಾಜಿಕ ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ವಿದ್ಯಾ ಪಿ.ಡಿ ರವರು ಭಾಗವಹಿಸಿ ಗ್ರಾಮ ಸಭೆಯನ್ನು ಮುನ್ನಡೆಸಿದರು.

‘ಒಂದು ಹೆಜ್ಜೆ ಸ್ವಚ್ಛತೆಯೆಡೆಗೆ’ ರಸ್ತೆ ಬದಿಗಳಲ್ಲಿ ಕಸ ಹಾಕುವವರ ವಿರುದ್ಧ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿ ಕಾಲೇಜು ವಿದ್ಯಾರ್ಥಿಯೋರ್ವಳು ಪಂಚಾಯತ್ ಗೆ ಆಗ್ರಹಿಸಿದಳು.
ದೇಜಪ್ಪ ಮೂಲ್ಯರ ಮನೆ ಬಳಿ ತಂತಿಗಳು ಜೋತು ಬಿದ್ದಿದ್ದು ಸರಿಪಡಿಸುವಂತೆ ಮೆಸ್ಕಾಂ ಇಲಾಖೆ ಗೆ ಗ್ರಾಮಸ್ಥರು ಮನವಿ ಮಾಡಿದರು. ಸೋಣಂದೂರು ಅಂಗನವಾಡಿ ಬಳಿ ಹಳೆ ಬಾವಿವಿದ್ದು ಅದನ್ನು ಮುಚ್ಚುವಂತೆ ಮನವಿ ಮಾಡಲಾಯಿತು.

ಮಾರ್ಗದರ್ಶಿ ಅಧಿಕಾರಿ ಮಾತನಾಡಿ ಗ್ರಾಮ ಸಭೆಯು ಆರೋಗ್ಯಕರವಾದಂತಹ ವಿಚಾರದ ಕುರಿತಾಗಿ ಉತ್ತಮವಾಗಿ ನಡೆಯಿತು ಎಂದು ಹೇಳಿದರು.

ಉಪಾಧ್ಯಕ್ಷರಾದ ಶ್ರೀಮತಿ ಸೆಲೆಸ್ಟಿನ್ ಡಿಸೋಜ, ಸದಸ್ಯರಾದ ಎಸ್ ಬೇಬಿ ಸುವರ್ಣ, ಶ್ರೀಮತಿ ಸುಸ್ಸಾನ, ದಿನೇಶ್ ಡಿ. ಕರ್ಕೇರ, ಕೆ ಸುಧಾಕರ ಆಳ್ವ, ಉಮೇಶ್, ಬೆನಡಿಕ್ಟ್ ಮಿರಾಂದ, ವಸಂತ ಪೂಜಾರಿ, ಶ್ರೀಮತಿ ಜಯಂತಿ, ಶ್ರೀಮತಿ ತುಳಸಿ ಬಿ, ರಾಜೇಶ್, ಶ್ರೀಮತಿ ಫರ್ಜನಾ, ಶ್ರೀಮತಿ ವಿದ್ಯಾ ಪಿ. ಸಾಲಿಯಾನ್, ಶ್ರೀಮತಿ ಗುಲಾಬಿ, ಶ್ರೀಮತಿ ಐರಿನ್ ಮೋರಾಸ್, ದಿನೇಶ್, ಶ್ರೀಮತಿ ರುಬೀನಾ, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ರೈ ಸ್ವಾಗತಿಸಿ, ಅನುಪಾಲನ ವರದಿ ವಾಚಿಸಿ, ಧನ್ಯವಾದವಿತ್ತರು.

Related posts

ಅಳದಂಗಡಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya

ಮಚ್ಚಿನ: ಬೈಕ್ ರೇಸ್ ನಲ್ಲಿ ಗಾಯಗೊಂಡ ನೌಷದ್ ರವರ ಆರೋಗ್ಯ ವಿಚಾರಿಸಿದ ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು, ಸದಸ್ಯರು

Suddi Udaya

ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ

Suddi Udaya

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

Suddi Udaya

ರಾಷ್ಟ್ರಮಟ್ಟದ ಪುರುಷರ ಯೋಗಾಸನ ಸ್ಪರ್ಧೆಗೆ ಉಜಿರೆಯ ಎಸ್‌ಡಿಎಂ ವಿದ್ಯಾರ್ಥಿಗಳ ಆಯ್ಕೆ

Suddi Udaya
error: Content is protected !!