23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

ಶಿರ್ಲಾಲು : ಶಿರ್ಲಾಲು ಯುವವಾಹಿನಿಯ ಪದ ಪ್ರದಾನ ಕಾರ್ಯಕ್ರಮವು ಊರ ಸದಾಶಿವ ಪೂಜಾರಿ ಇವರ ಮನೆಯಲ್ಲಿ ನಡೆಯಿತು.

ಮುಖ್ಯಅತಿಥಿಗಳಾಗಿ ಬೆಳ್ತಂಗಡಿ ಯುವವಾಹಿನಿ ಘಟಕದ ನಿಕಟಪೂರ್ವ ಅಧ್ಯಕ್ಷರಾದ ಅಶ್ವಥ್ ಕುಮಾರ್ ಮಾತನಾಡಿ ಶಿರ್ಲಾಲು ಯುವಾವಾಹಿನಿ ಸಂಚಲನ ಸಮಿತಿ ಸಮಾಜಮುಖಿ ಕೆಲಸಗಳ ಮೂಲಕ ತಾಲೂಕಿಗೆ ಮದರಿಯಾಗುವ ರೀತಿಯಲ್ಲಿ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಬಂದಿರುವುದು ನಮಗೆಲ್ಲಾ ಹೆಮ್ಮೆಯ ವಿಷಯ ಇನ್ನೂ ಮುಂದೆಯೂ ಹೊಸ ಸಮಿತಿ ಇನ್ನಷ್ಟು ಸಮಾಜಮುಖಿ ಕೆಲಸಕಾರ್ಯಗಳನ್ನು ಮಾಡುವಂತಗಲಿ ನಮ್ಮ ಸಹಕಾರ ಸದಾ ಇದೆ ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾಶಿವ ಊರ ನೂತನ ಪದಾಧಿಕಾರಿಗಳನ್ನು ಗೌರವಿಸಿ ಸಂಘಟನೆಯ ಬಗ್ಗೆ ಮಾಹಿತಿ ನೀಡಿ ಶುಭಕೋರಿದರು.

ಈ ಸಂದರ್ಭದಲ್ಲಿ ಒಂದು ವರ್ಷದ ಅವಧಿಯಲ್ಲಿ ಸಂಚಲನ ಸಮಿತಿಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದ ನಿಕಟಪೂರ್ವ ಅಧ್ಯಕ್ಷ ಜಯಕುಮಾರ್ ಇವರಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘ ಸಂಸ್ಥೆಯಿಂದ ಗೌರವಾರ್ಪಣೆ ಮಾಡಲಾಯಿತು. ವೇದಿಕೆಯಲ್ಲಿ ಯುವವಾಹಿನಿ ಸಂಚಲನ ಸಮಿತಿಯ ನಿಯೋಜಿತ ಅಧ್ಯಕ್ಷ ಸನತ್ ಕುಮಾರ್ ಪಿಜಾಕೋಡಂಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಪ್ರವೀಣ್ ಕೋಟ್ಯಾನ್ ಪಾಲನೆ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಹರೀಶ್ ಕಲ್ಲಾಜೆ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷ ಕುಶಲಾ ರಮೇಶ್ ಪೂಜಾರಿ ಉಪಸ್ಥಿತರಿದ್ದರು.

ಸಾಮೂಹಿಕ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವು ಜ್ಞಾನೇಶ್ ಕುಮಾರ್ ಕಟ್ಟ ಇವರು ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಸಂಚಲನ ಸಮಿತಿಯ ಕಾರ್ಯದರ್ಶಿ ಯತೀಶ್ ಕರಂಬಾರು ವಾರ್ಷಿಕ ವರದಿ ಮಂಡನೆ ಮಾಡಿದರು. ವಿಜಯ್ ಕುಮಾರ್ ಹೇಡ್ಯದಡ್ಡ ಕಾರ್ಯಕ್ರಮ ನಿರೂಪಿಸಿದರು. ಸಮಿತಿಯ ಪದಾಧಿಕಾರಿಗಳು ಸಹಕಾರ ನೀಡಿದರು. ಪುರಂದರ ಕಟ್ರಬೈಲ್ ಧನ್ಯವಾದವಿತ್ತರು.

Related posts

ಕಾಶಿಪಟ್ಣ ಗ್ರಾ.ಪಂ.ನಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

Suddi Udaya

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

Suddi Udaya

ಬಳಂಜ: ಎಲ್ಯೊಟ್ಟು ನಿವಾಸಿ ಸೋಮನಾಥ ಪೂಜಾರಿ ನಿಧನ

Suddi Udaya

ಸುದ್ದಿ ಉದಯ ಫಲಶ್ರುತಿ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು ವರದಿ ಬೆನ್ನಲ್ಲೇ ತೆಗೆದಿದ್ದ ಬೇಲಿಗಳ ಅಳವಡಿಕೆ

Suddi Udaya

ಪಿಲ್ಯ: ಬರಾಯದಲ್ಲಿ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
error: Content is protected !!