22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿ: ಆರು ಮಂದಿಗೆ‌ ಗಾಯ- ಗಂಭೀರ ಗಾಯಗೊಂಡ‌ ಯುವಕ ಪುತ್ತೂರು ಆಸ್ಪತ್ರೆಗೆ ದಾಖಲು

ಮಚ್ಚಿನ: ಇಲ್ಲಿಯ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿಯಿಂದ ಆರು ಮಂದಿ ಗಾಯಗೊಂಡಿದ್ದು, ಗಂಭೀರ ಗಾಯಗೊಂಡ‌ ಓವ೯ನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಇಂದು ಬೆಳಗ್ಗೆ ಮಚ್ಚಿನ ಕೊಡಿಯೇಲು‌ ಕೊರೆಗೆ ತಿರುಗುವ‌ ರಸ್ತೆ ಬಳಿಯಲ್ಲಿ ಮರದಲ್ಲಿ ಇದ್ದ ಹೆಜ್ಜೇನು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ದಾಳಿ ನಡೆಸಿದೆ. ಇದರಿಂದಾಗಿ ಕೊರೆಗೆ ಕೆಲಸಕ್ಕೆ ಹೋಗುತ್ತಿದ್ದ ನಾಲ್ವರು ಕಾರ್ಮಿಕರು, ಬಳ್ಳಮಂಜ ಮೀನು ಮಾರುಕಟ್ಟೆಗೆ ಕೆಲಸಕ್ಕೆ ಬರುತ್ತಿದ್ದ ಯುವಕ ಸೇರಿದಂತೆ ಆರು ಮಂದಿಗೆ ಹೆಜ್ಜೇನು ಕಚ್ಚಿದೆ.


‌ಬಳ್ಳಮಂಜ ಮೀನು ಮಾರುಕಟ್ಟೆಗೆ ಕೆಲಸಕ್ಕೆ ಬರುತ್ತಿದ್ದ ಯುವಕನಿಗೆ ಹೆಚ್ಚು ಗಾಯವಾಗಿದ್ದು, ಆತನನ್ನು ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ನೀಡಿ,‌ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಜ್ಜೇನು ದಾಳಿಗೆ ಒಳಗಾದ ಒಬ್ಬರು ‌ವಾಟ್ಸಪ್ ನಲ್ಲಿ ವಾಯ್ಸ್ ಮೆಸೇಜ್ ಹಾಕಿ ಆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿರುವವರಿಗೆ ಎಚ್ಚರಿಕೆ ನೀಡುವ ಕಾಯ೯ವನ್ನು ಮಾಡಿದರು.

Related posts

ಅರಸಿನಮಕ್ಕಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಅಭಿವೃದ್ಧಿಯ ಹರಿಕಾರ, ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಪ್ರಯುಕ್ತ ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಶಾಲೆಯ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಹರೀಶ್ ಪೂಂಜ ಅಭಿಮಾನಿ ಬಳಗ

Suddi Udaya

ಕರುಣಾಶ್ರಯ ಸೇವಾ ಟ್ರಸ್ಟ್‌ನಿಂದ ವಾರದ ಒಂದು ದಿನದ ಸೇವಾ ಕಾರ್ಯಕ್ರಮ: ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮಕ್ಕೆ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಪೂಜಾರಿ ಲಾಯಿಲರವರಿಗೆ ಸನ್ಮಾನ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ವಸಂತಿ ಗೌಡ ಇವರಿಂದ ದೇಣಿಗೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ

Suddi Udaya
error: Content is protected !!