September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿ: ಆರು ಮಂದಿಗೆ‌ ಗಾಯ- ಗಂಭೀರ ಗಾಯಗೊಂಡ‌ ಯುವಕ ಪುತ್ತೂರು ಆಸ್ಪತ್ರೆಗೆ ದಾಖಲು

ಮಚ್ಚಿನ: ಇಲ್ಲಿಯ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿಯಿಂದ ಆರು ಮಂದಿ ಗಾಯಗೊಂಡಿದ್ದು, ಗಂಭೀರ ಗಾಯಗೊಂಡ‌ ಓವ೯ನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಇಂದು ಬೆಳಗ್ಗೆ ಮಚ್ಚಿನ ಕೊಡಿಯೇಲು‌ ಕೊರೆಗೆ ತಿರುಗುವ‌ ರಸ್ತೆ ಬಳಿಯಲ್ಲಿ ಮರದಲ್ಲಿ ಇದ್ದ ಹೆಜ್ಜೇನು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ದಾಳಿ ನಡೆಸಿದೆ. ಇದರಿಂದಾಗಿ ಕೊರೆಗೆ ಕೆಲಸಕ್ಕೆ ಹೋಗುತ್ತಿದ್ದ ನಾಲ್ವರು ಕಾರ್ಮಿಕರು, ಬಳ್ಳಮಂಜ ಮೀನು ಮಾರುಕಟ್ಟೆಗೆ ಕೆಲಸಕ್ಕೆ ಬರುತ್ತಿದ್ದ ಯುವಕ ಸೇರಿದಂತೆ ಆರು ಮಂದಿಗೆ ಹೆಜ್ಜೇನು ಕಚ್ಚಿದೆ.


‌ಬಳ್ಳಮಂಜ ಮೀನು ಮಾರುಕಟ್ಟೆಗೆ ಕೆಲಸಕ್ಕೆ ಬರುತ್ತಿದ್ದ ಯುವಕನಿಗೆ ಹೆಚ್ಚು ಗಾಯವಾಗಿದ್ದು, ಆತನನ್ನು ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ನೀಡಿ,‌ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಜ್ಜೇನು ದಾಳಿಗೆ ಒಳಗಾದ ಒಬ್ಬರು ‌ವಾಟ್ಸಪ್ ನಲ್ಲಿ ವಾಯ್ಸ್ ಮೆಸೇಜ್ ಹಾಕಿ ಆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿರುವವರಿಗೆ ಎಚ್ಚರಿಕೆ ನೀಡುವ ಕಾಯ೯ವನ್ನು ಮಾಡಿದರು.

Related posts

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಶ್ರೀ ಮಂಜುನಾಥ ಬನ್ನಿಸ್ ಟಂಟೋಲ’ ಘಟಕಕ್ಕೆ ಚಾಲನೆ

Suddi Udaya

ಏ.2-10: ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ: ತ್ರಿಭುವನ ಮೊಬೈಲ್ ಶಾಪ್ ಶುಭಾರಂಭ,

Suddi Udaya

ಬುಳೇರಿಮೊಗ್ರು ಪ್ರೌಢಶಾಲೆಗೆ ಸತತ 4ನೇ ವರ್ಷ ಶೇ.100 ಫಲಿತಾಂಶ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಅಭಿವೃದ್ಧಿಗೆ ಧರ್ಮಸ್ಥಳದಿಂದ ರೂ.1 ಲಕ್ಷ ದೇಣಿಗೆ

Suddi Udaya

ಅಶ್ರಫ್ ಆಲಿಕುಂಞಿ (ಅಚ್ಚು) ಮುಂಡಾಜೆ ಅವರಿಗೆ ಲಯನ್ಸ್ ಜಿಲ್ಲಾ “ಗೋಲ್ಡನ್ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್” ಪುರಸ್ಕಾರ

Suddi Udaya
error: Content is protected !!