23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

ಉಜಿರೆ: ಕಠಿಣ ಪರಿಶ್ರಮವೇ ಯಶಸ್ಸಿನ ಗುಟ್ಟು, ಯಶಸ್ಸು ಎಂಬುದು ಸುಲಭವಾಗಿ ದಕ್ಕುವಂತದ್ದಲ್ಲ, ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಕೆಲಸ ಮಾಡಬೇಕು, ಇಚ್ಛಾಶಕ್ತಿ ಬೇಕು, ಜೊತೆಗೆ ಕೆಲಸವನ್ನು ಕಷ್ಟವೆನ್ನದೆ ಇಷ್ಟಪಟ್ಟು ಮಾಡಿ ಎಂದರು. ಅನೇಕ ಯುವಕ/ಯುವತಿಯರು ರುಡ್‌ಸೆಟ್ ಸಂಸ್ಥೆಯಲ್ಲಿ ಕಲಿತು ಸಾಧನೆ ಮಾಡಿದವರ ಸಾಲಿಗೆ ನೀವು ಬರಬೇಕು, ನಿಮ್ಮ ಬದುಕಿನ ಕಥೆಗಳೇ ನಾಳೆ ಸಾಧನೆಯ ಕಥೆಗಳಾಗಿ ಬದಲಾಗಬೇಕು ಎಂದು ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನ್ ರವರು ಅಭಿಪ್ರಾಯ ಪಟ್ಟರು.

ಅವರು ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಗಿರಿಧರ್ ಕಲ್ಲಾಪುರರವರು ಅಧ್ಯಕ್ಷತೆ ವಹಿಸಿದ್ದರು, ಸಂಸ್ಥೆಯ ನಿರ್ದೇಶಕ ಎಮ್. ಸುರೇಶ್‌ರವರು ಉಪಸ್ಥಿತರಿದ್ದರು. ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್‌ರವರು ಕಾರ್ಯಕ್ರಮ ನಿರೂಪಿಸಿ, ಹಿರಿಯ ಉಪನ್ಯಾಕರಾದ ಶ್ರೀಮತಿ ಅನಸೂಯ ವಂದಿಸಿದರು. 13 ದಿನಗಳ ಈ ಕಾರ್ಯಕ್ರಮದಲ್ಲಿ 31 ಅಭ್ಯರ್ಥಿಗಳು ಭಾಗವಹಿಸುವುದರ ಜೊತೆಗೆ 31 ವಿವಿಧ ಉದ್ಯಮಗಳನ್ನು ಪ್ರಾರಂಭಿಸುವ ಬಗ್ಗೆ ರೂಪು ರೇಷೆಗಳನ್ನು ತಯಾರಿಸಿದರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Related posts

ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಕೊಠಡಿಗೆ ಶಿಲಾನ್ಯಾಸ

Suddi Udaya

ಕಳೆಂಜ ಗ್ರಾ,ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ಸಭೆ

Suddi Udaya

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಬೆಳಾಲು : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ದ್ವಿಚಕ್ರ ವಾಹನ ಸವಾರ ಸಾವು

Suddi Udaya

‌ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಮ್ ಇದರ 60ನೇ ವರ್ಷದ ವಾರ್ಷಿಕ ಹಾಗೂ ಗುರುಮಂದಿರದ ಪ್ರತಿಷ್ಠಾ ವಾರ್ಷಿಕದ ಅಂಗವಾಗಿ ಗುರುಪೂಜೆ ಹಾಗೂ ವಾರ್ಷಿಕ ಮಹಾಸಭೆ

Suddi Udaya
error: Content is protected !!