ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

ಉಜಿರೆ: ಕಠಿಣ ಪರಿಶ್ರಮವೇ ಯಶಸ್ಸಿನ ಗುಟ್ಟು, ಯಶಸ್ಸು ಎಂಬುದು ಸುಲಭವಾಗಿ ದಕ್ಕುವಂತದ್ದಲ್ಲ, ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಕೆಲಸ ಮಾಡಬೇಕು, ಇಚ್ಛಾಶಕ್ತಿ ಬೇಕು, ಜೊತೆಗೆ ಕೆಲಸವನ್ನು ಕಷ್ಟವೆನ್ನದೆ ಇಷ್ಟಪಟ್ಟು ಮಾಡಿ ಎಂದರು. ಅನೇಕ ಯುವಕ/ಯುವತಿಯರು ರುಡ್‌ಸೆಟ್ ಸಂಸ್ಥೆಯಲ್ಲಿ ಕಲಿತು ಸಾಧನೆ ಮಾಡಿದವರ ಸಾಲಿಗೆ ನೀವು ಬರಬೇಕು, ನಿಮ್ಮ ಬದುಕಿನ ಕಥೆಗಳೇ ನಾಳೆ ಸಾಧನೆಯ ಕಥೆಗಳಾಗಿ ಬದಲಾಗಬೇಕು ಎಂದು ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನ್ ರವರು ಅಭಿಪ್ರಾಯ ಪಟ್ಟರು.

ಅವರು ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಗಿರಿಧರ್ ಕಲ್ಲಾಪುರರವರು ಅಧ್ಯಕ್ಷತೆ ವಹಿಸಿದ್ದರು, ಸಂಸ್ಥೆಯ ನಿರ್ದೇಶಕ ಎಮ್. ಸುರೇಶ್‌ರವರು ಉಪಸ್ಥಿತರಿದ್ದರು. ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್‌ರವರು ಕಾರ್ಯಕ್ರಮ ನಿರೂಪಿಸಿ, ಹಿರಿಯ ಉಪನ್ಯಾಕರಾದ ಶ್ರೀಮತಿ ಅನಸೂಯ ವಂದಿಸಿದರು. 13 ದಿನಗಳ ಈ ಕಾರ್ಯಕ್ರಮದಲ್ಲಿ 31 ಅಭ್ಯರ್ಥಿಗಳು ಭಾಗವಹಿಸುವುದರ ಜೊತೆಗೆ 31 ವಿವಿಧ ಉದ್ಯಮಗಳನ್ನು ಪ್ರಾರಂಭಿಸುವ ಬಗ್ಗೆ ರೂಪು ರೇಷೆಗಳನ್ನು ತಯಾರಿಸಿದರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Related posts

ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ಗೆ ಚಿನ್ನದ ಪದಕ

Suddi Udaya

ಮನೆಯಲ್ಲಿ ಜಾರಿ ಬಿದ್ದು ತಲೆಗೆ ಏಟು: ಚಿಕಿತ್ಸೆ ಫಲಕಾರಿಯಾಗದೆ ಚಾರ್ಮಾಡಿ ಶಾಲಾ ಶಿಕ್ಷಕಿ ಸುಪ್ರಭಾ ಮೃತ್ಯು

Suddi Udaya

ನಾರಾವಿ ಮಂಜುನಗರದಲ್ಲಿ ಇನೋವಾ ಕಾರು ಬೈಕ್ ಗೆ ಡಿಕ್ಕಿ: ಸವಾರ ಭಾಸ್ಕರ ಆಚಾರ್ಯರಿಗೆ ಗಾಯ

Suddi Udaya

ಅಳದಂಗಡಿ ಮೆಸ್ಕಾಂ ಇಲಾಖೆಯಲ್ಲಿ ಆಯುಧ ಪೂಜೆ

Suddi Udaya

ಹೆಚ್‌ಡಿಎಫ್‌ಸಿ ಬ್ಯಾಂಕ್ ಬೆಳ್ತಂಗಡಿ ಶಾಖೆಯಲ್ಲಿ ಸಿಡಿಎಂ ಸೌಲಭ್ಯ ಆರಂಭ

Suddi Udaya

ಗುರುವಾಯನಕೆರೆ: 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆಯ್ಕೆ

Suddi Udaya
error: Content is protected !!