23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

ಉಜಿರೆ: ಕಠಿಣ ಪರಿಶ್ರಮವೇ ಯಶಸ್ಸಿನ ಗುಟ್ಟು, ಯಶಸ್ಸು ಎಂಬುದು ಸುಲಭವಾಗಿ ದಕ್ಕುವಂತದ್ದಲ್ಲ, ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಕೆಲಸ ಮಾಡಬೇಕು, ಇಚ್ಛಾಶಕ್ತಿ ಬೇಕು, ಜೊತೆಗೆ ಕೆಲಸವನ್ನು ಕಷ್ಟವೆನ್ನದೆ ಇಷ್ಟಪಟ್ಟು ಮಾಡಿ ಎಂದರು. ಅನೇಕ ಯುವಕ/ಯುವತಿಯರು ರುಡ್‌ಸೆಟ್ ಸಂಸ್ಥೆಯಲ್ಲಿ ಕಲಿತು ಸಾಧನೆ ಮಾಡಿದವರ ಸಾಲಿಗೆ ನೀವು ಬರಬೇಕು, ನಿಮ್ಮ ಬದುಕಿನ ಕಥೆಗಳೇ ನಾಳೆ ಸಾಧನೆಯ ಕಥೆಗಳಾಗಿ ಬದಲಾಗಬೇಕು ಎಂದು ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನ್ ರವರು ಅಭಿಪ್ರಾಯ ಪಟ್ಟರು.

ಅವರು ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಗಿರಿಧರ್ ಕಲ್ಲಾಪುರರವರು ಅಧ್ಯಕ್ಷತೆ ವಹಿಸಿದ್ದರು, ಸಂಸ್ಥೆಯ ನಿರ್ದೇಶಕ ಎಮ್. ಸುರೇಶ್‌ರವರು ಉಪಸ್ಥಿತರಿದ್ದರು. ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್‌ರವರು ಕಾರ್ಯಕ್ರಮ ನಿರೂಪಿಸಿ, ಹಿರಿಯ ಉಪನ್ಯಾಕರಾದ ಶ್ರೀಮತಿ ಅನಸೂಯ ವಂದಿಸಿದರು. 13 ದಿನಗಳ ಈ ಕಾರ್ಯಕ್ರಮದಲ್ಲಿ 31 ಅಭ್ಯರ್ಥಿಗಳು ಭಾಗವಹಿಸುವುದರ ಜೊತೆಗೆ 31 ವಿವಿಧ ಉದ್ಯಮಗಳನ್ನು ಪ್ರಾರಂಭಿಸುವ ಬಗ್ಗೆ ರೂಪು ರೇಷೆಗಳನ್ನು ತಯಾರಿಸಿದರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Related posts

ತಣ್ಣೀರುಪಂತ ಸುಗಮ ಸಂಜೀವಿನಿ ಹಾಗೂ ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಮಗ್ರ ಕೃಷಿ ಚಟುವಟಿಕೆಯ ಮಾಹಿತಿ ಕಾರ್ಯಾಗಾರ

Suddi Udaya

ಎಕ್ಸೆಲ್ ಗುರುವಾಯನಕೆರೆ: ದ್ವಿತೀಯ ಪಿಯುಸಿಯಲ್ಲಿ ಅಭೂತ ಪೂರ್ವ ಸಾಧನೆ-ರಾಜ್ಯದ ಟಾಪ್ 10 ರಲ್ಲಿ ಎಕ್ಸೆಲ್ ನ 34 ವಿದ್ಯಾರ್ಥಿಗಳು

Suddi Udaya

ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಲಾವಿದ ಮುಂಡಾಜೆಯ ಜಯರಾಂ ಕೆ. ಮೃತ್ಯು

Suddi Udaya

ಉಜಿರೆ: ವೃದ್ಧೆ ಸುಶೀಲಾ ರವರ ಮನೆಯ ಛಾವಣಿ ಬೀಳುವ ಹಂತದಲ್ಲಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತಾತ್ಕಾಲಿಕವಾಗಿ ಟರ್ಪಾಲ್ ಹೊದಿಕೆ

Suddi Udaya

ಆದಿಗುರು ಫ್ಯಾಷನ್ ಡಿಸೈನ್ ವಿದ್ಯಾರ್ಥಿಗಳಿಂದ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿ

Suddi Udaya

ಬಳಂಜ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ, ವಿವಿಧ ಸಂಘ ಸಂಸ್ಥೆಗಳು ಭಾಗಿ

Suddi Udaya
error: Content is protected !!