September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

ಶಿರ್ಲಾಲು : ಶಿರ್ಲಾಲು ಯುವವಾಹಿನಿಯ ಪದ ಪ್ರದಾನ ಕಾರ್ಯಕ್ರಮವು ಊರ ಸದಾಶಿವ ಪೂಜಾರಿ ಇವರ ಮನೆಯಲ್ಲಿ ನಡೆಯಿತು.

ಮುಖ್ಯಅತಿಥಿಗಳಾಗಿ ಬೆಳ್ತಂಗಡಿ ಯುವವಾಹಿನಿ ಘಟಕದ ನಿಕಟಪೂರ್ವ ಅಧ್ಯಕ್ಷರಾದ ಅಶ್ವಥ್ ಕುಮಾರ್ ಮಾತನಾಡಿ ಶಿರ್ಲಾಲು ಯುವಾವಾಹಿನಿ ಸಂಚಲನ ಸಮಿತಿ ಸಮಾಜಮುಖಿ ಕೆಲಸಗಳ ಮೂಲಕ ತಾಲೂಕಿಗೆ ಮದರಿಯಾಗುವ ರೀತಿಯಲ್ಲಿ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಬಂದಿರುವುದು ನಮಗೆಲ್ಲಾ ಹೆಮ್ಮೆಯ ವಿಷಯ ಇನ್ನೂ ಮುಂದೆಯೂ ಹೊಸ ಸಮಿತಿ ಇನ್ನಷ್ಟು ಸಮಾಜಮುಖಿ ಕೆಲಸಕಾರ್ಯಗಳನ್ನು ಮಾಡುವಂತಗಲಿ ನಮ್ಮ ಸಹಕಾರ ಸದಾ ಇದೆ ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾಶಿವ ಊರ ನೂತನ ಪದಾಧಿಕಾರಿಗಳನ್ನು ಗೌರವಿಸಿ ಸಂಘಟನೆಯ ಬಗ್ಗೆ ಮಾಹಿತಿ ನೀಡಿ ಶುಭಕೋರಿದರು.

ಈ ಸಂದರ್ಭದಲ್ಲಿ ಒಂದು ವರ್ಷದ ಅವಧಿಯಲ್ಲಿ ಸಂಚಲನ ಸಮಿತಿಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದ ನಿಕಟಪೂರ್ವ ಅಧ್ಯಕ್ಷ ಜಯಕುಮಾರ್ ಇವರಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘ ಸಂಸ್ಥೆಯಿಂದ ಗೌರವಾರ್ಪಣೆ ಮಾಡಲಾಯಿತು. ವೇದಿಕೆಯಲ್ಲಿ ಯುವವಾಹಿನಿ ಸಂಚಲನ ಸಮಿತಿಯ ನಿಯೋಜಿತ ಅಧ್ಯಕ್ಷ ಸನತ್ ಕುಮಾರ್ ಪಿಜಾಕೋಡಂಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಪ್ರವೀಣ್ ಕೋಟ್ಯಾನ್ ಪಾಲನೆ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಹರೀಶ್ ಕಲ್ಲಾಜೆ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷ ಕುಶಲಾ ರಮೇಶ್ ಪೂಜಾರಿ ಉಪಸ್ಥಿತರಿದ್ದರು.

ಸಾಮೂಹಿಕ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವು ಜ್ಞಾನೇಶ್ ಕುಮಾರ್ ಕಟ್ಟ ಇವರು ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಸಂಚಲನ ಸಮಿತಿಯ ಕಾರ್ಯದರ್ಶಿ ಯತೀಶ್ ಕರಂಬಾರು ವಾರ್ಷಿಕ ವರದಿ ಮಂಡನೆ ಮಾಡಿದರು. ವಿಜಯ್ ಕುಮಾರ್ ಹೇಡ್ಯದಡ್ಡ ಕಾರ್ಯಕ್ರಮ ನಿರೂಪಿಸಿದರು. ಸಮಿತಿಯ ಪದಾಧಿಕಾರಿಗಳು ಸಹಕಾರ ನೀಡಿದರು. ಪುರಂದರ ಕಟ್ರಬೈಲ್ ಧನ್ಯವಾದವಿತ್ತರು.

Related posts

ಬರಾಯಕೆರೆ ಕಪ್ಪು ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಭೇಟಿ

Suddi Udaya

ಜೂ.15-21: ಬೆಳ್ತಂಗಡಿಯಲ್ಲಿ ಖ್ಯಾತ ವಾಗ್ಮಿ ಡಾ. ವೀಣಾ ಬನ್ನಂಜೆಯವರಿಂದ ಸಂಪೂರ್ಣ ರಾಮಾಯಣ ಪ್ರವಚನ ಸಪ್ತಾಹ

Suddi Udaya

ಕುಂಡದಬೆಟ್ಟು: ಮಂಜುಶ್ರೀ ಭಜನಾ ಮಂಡಳಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರಿಗೆ ಕೊಯ್ಯೂರಿನ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಅಭಿನಂದನೆ

Suddi Udaya

ಮೂಡುಕೋಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ, ಗಾಯ

Suddi Udaya
error: Content is protected !!