23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ

ಕಾಯರ್ತ್ತಡ್ಕ : ಜೆ ಸಿ ಐ ಕೊಕ್ಕಡ ಕಪಿಲ ಘಟಕ ಇದರ ವತಿಯಿಂದ ದಿವ್ಯಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತ್ತಡ್ಕ ಇಲ್ಲಿನ ವಿದ್ಯಾರ್ಥಿಗಳಿಗೆ ಗೆಲುವಿಗೆ ಇನ್ನೊಂದೇ ಮೆಟ್ಟಿಲು ಎಂಬ ಶೀರ್ಷಿಕೆಯ ಅಡಿಯಲ್ಲಿ ಪರೀಕ್ಷೆ ಎದುರಿಸುವುದು ಹೇಗೆ ಎಂಬ ತರಬೇತಿ ಕಾರ್ಯಕ್ರಮ ಆಯೋಜಿಸಲಾಯಿತು.

ಈ ತರಬೇತಿ ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಯಾದ ಜೆ ಸಿ ಐ ವಲಯ ತರಬೇತಿದಾರರಾದ ಜೆಸಿಐ ಸೀನಿಯರ್ ಪ್ರದೀಪ್ ಬಾಕಿಲ ನಡೆಸಿಕೊಟ್ಟರು.

ವೇದಿಕೆಯಲ್ಲಿ ಅಧ್ಯಕ್ಷರಾದ ಜೆ ಸಿ ಎಚ್‌ ಜಿ ಎಫ್ ಸಂತೋಷ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ, ಮುಖ್ಯ ಅತಿಥಿಯಾದ ಸಿ| ದಿವ್ಯ ಮರಿಯಾ ಮುಖ್ಯೋಪಾಧ್ಯಾಯರು ಕಾಯರ್ತ್ತಡ್ಕ, ಕಾರ್ಯಕ್ರಮದ ನಿರ್ದೇಶಕರಾದ ಜೆ ಸಿ ಪಿ ಟಿ ಸೆಬಾಸ್ಟಿನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪೂರ್ವ ಅಧ್ಯಕ್ಷರಾದ ಜೆ ಸಿ ಜೆ ಎಫ್ ಎಂ ಕೆ ಶ್ರೀಧರ್ ರಾವ್, ಕೋಶಾಧಿಕಾರಿ ವಿದ್ಯೇಂದ್ರ ಹಾಗೂ ಪ್ರಿಯಾ ಜೆ ಅಮೀನ್, ಶಾಲೆಯ ಶಿಕ್ಷಕ ವೃಂದ ಆಡಳಿತ ಮಂಡಳಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ಜೆಸಿ ಜಾನ್ಸನ್ ವಿತರಿಸಿದರು. ಜೆಸಿ ವಾಣಿ ಜೆಸಿ ಶ್ರವಣ್ ವಾಚಿಸಿದರು. ಜೆಸಿ ಎಚ್ ಜಿ ಎಫ್ ಸಂತೋಷ್ ಜೈನ್ ಸ್ವಾಗತಿಸಿ, ಜೆ ಸಿ ಪಿಟಿ ಸೆಬಾಸ್ಟಿನ್ ಧನ್ಯವಾದವಿತ್ತರು.

Related posts

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ರೇಬಿಸ್ ಜಾಗೃತಿ ಕಾರ್ಯಕ್ರಮ

Suddi Udaya

ಶಿಶಿಲ : ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಡಿತ; ಮಹಿಳೆ ಸಾವು

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜು ಆಶ್ರಯದಲ್ಲಿ ಅಧಿವಕ್ತ ಪರಿಷದ್ ದ.ಕ. ಜಿಲ್ಲಾ ಘಟಕ ಮತ್ತು ಬೆಳ್ತಂಗಡಿ ವಕೀಲರ ಸಂಘದ ಸಹಯೋಗದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

Suddi Udaya

ಶಿರ್ಲಾಲು ಸ.ಉ.ಪ್ರಾ. ಶಾಲೆಯ ಮಕ್ಕಳಿಗೆ ವಕೀಲರು ಮುರುಳಿ ಬಿ. ರವರಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ: ಬಂಟರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನಿಧನ

Suddi Udaya
error: Content is protected !!