July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವ ಪೂರ್ವಾಭಾವಿ ಸಭೆ

ನಾವರ:ಊರಿನ ಶ್ರದ್ದಾ ಕೇಂದ್ರಗಳ ಪುನರ್ ನಿರ್ಮಾಣದಿಂದ ಊರಿನಲ್ಲಿ ಪರಿವರ್ತನೆಯ ಬೆಳಕು ಸಂಚರಿಸಿ ಮನೆ- ಮನ ಬೆಳಗುತ್ತದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.ಅವರು ಫೆ. 23 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆದ ಬ್ರಹ್ಮಕಲಶೋತ್ಸವದ ಪೂರ್ವಾಭಾವಿ ಸಭೆಯಲ್ಲಿ ಮಾತನಾಡಿದರು.

ಮಾ.31 ರಿಂದ ಎ.4 ರವರೆಗೆ ನಡೆಯಲಿರುವ ನಾವರ ಬ್ರಹ್ಮಕಲಶೋತ್ಸವಕ್ಕೆ ಊರ ಭಕ್ತರು ಸಂಪೂರ್ಣ ಸಹಕಾರ ನೀಡಬೇಕು.ಅನ್ನದಾನ ಶ್ರೇಷ್ಠದಾನವಾಗಿದ್ದು ಎಲ್ಲರೂ ಅನ್ನದಾನಕ್ಕೆ ಸಹಕಾರ ನೀಡಬೇಕೆಂದು ಹೇಳಿದರು.ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು, ದೇವಸ್ಥಾನದ ಭಕ್ತರು ಸೇರಿದ್ದು ಬ್ರಹ್ಮಕಲಶೋತ್ಸವದ ಯಶಸ್ವಿಗೆ ಸಹಕಾರ ನೀಡುವ ಭರವಸೆ ನೀಡಿದರು.ಸಭೆಯಲ್ಲಿ ದೇಗುಲದಲ್ಲಿ ಹಲವಾರು ಶಾಶ್ವತ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಾಗುವುದು. ದೇಗುಲದ ಜೀರ್ಣೋದ್ಧಾರ ಕಾರ್ಯಕ್ಕೆ ರೂ.10 ಲಕ್ಷ ಅನುದಾನ ಮಂಜೂರುಗೊಳಿಸುವ ಭರವಸೆಯನ್ನು ಶಾಸಕ ಹರೀಶ್ ಪೂಂಜರವರು ನೀಡಿರುತ್ತಾರೆಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ ಮಾಹಿತಿ ನೀಡಿದರು.

‌ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ನಿತ್ಯಾನಂದ ಎನ್ ನಾವರ,ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಕಾಪಿನಡ್ಕ,ಆರ್ಚಕರಾದ ನಾರಾಯಣ ರಾವ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಯೋಜನಾಧಿಕಾರಿ ದಯಾನಂದ, ಅಳದಂಗಡಿ ಸಿಎ ಬ್ಯಾಂಕ್ ನ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ,ಶಿರ್ಲಾಲು ಸಿಎ ಬ್ಯಾಂಕ್ ಅಧ್ಯಕ್ಷ ನವೀನ್ ಕೆ ಸಾಮಾನಿ, ಪ್ರಮುಖರಾದ ಜಯಾನಂದ ಕೊರಲ್ಲ ಉಪಸ್ಥಿತರಿದ್ದರು.

ಆಮಂತ್ರಣ ಪರಿವಾರದ ಸಂಚಾಲಕ ವಿಜಯ್ ಕುಮಾರ್ ಜೈನ್ ಕಾರ್ಯಕ್ರಮ ನಿರೂಪಿಸಿದರು. ಊರವರು, ಭಕ್ತಾದಿಗಳು ಸಹಕರಿಸಿದರು.

Related posts

ಶಾಸಕರಿಂದ ವಿವಾದಾತ್ಮಕ ಹೇಳಿಕೆ ಆರೋಪಿಸಿ ಮಹಿಳಾ ಕಾಂಗ್ರೆಸ್ ನಿಂದ ಠಾಣೆಗೆ ದೂರು

Suddi Udaya

ಡಿ.3: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬಂಟೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ: ಉದ್ಯಮಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಭಾಗಿ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಪುದುವೆಟ್ಟು: ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಡಿಸೆಂಬರ್ ತಿಂಗಳಲ್ಲಿ ಶಿರ್ಲಾಲು ದೇವಸ್ಥಾನದ ಬ್ರಹ್ಮಕಲಶ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪೂರ್ವಭಾವಿ ಸಭೆ

Suddi Udaya
error: Content is protected !!