September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

ಬೆಳ್ತಂಗಡಿ: ರಾಜ್ಯದಲ್ಲಿ ನೀರಿನ ಆಶ್ರಯಕ್ಕೆ ಪಾರಂಪರಿಕವಾಗಿ ನಿರ್ಮಿಸಿದ ಬಹುತೇಕ ಕೆರೆಗಳು ರಾಜ್ಯಾದ್ಯಂತ ಒತ್ತುವರಿಗೊಂಡು ಕಟ್ಟಡ ಹಾಗೂ ಕೃಷಿಯೇತರ ಚಟುವಟಿಕೆಯ ಪಾಲಾಗಿರುವುದು ನಿಜವೇ; ಕೆರೆಗಳ ಒತ್ತುವರಿ ತೆರವಿಗೆ ಲೋಕಾಯುಕ್ತವು ಸೋಮೋಟೋ ಅಸ್ತ್ರ ಉಪಯೋಗಿಸಿದ್ದು ಬೆಳ್ತಂಗಡಿ ತಾಲ್ಲೂಕಿಗೆ ಸಂಬಂಧಿಸಿದಂತೆ ಪಟ್ಟಣ ಹಾಗೂ ತಾಲ್ಲೂಕಿನ 81 ಗ್ರಾಮಗಳಲ್ಲಿ ಸದ್ಯ 76 ಸಾರ್ವಜನಿಕ ಕೆರೆಗಳಿದ್ದು ಸದರಿ ಕೆರೆಗಳ ಒತ್ತುವರಿ ತಡೆಯುವ ನಿಟ್ಟಿನಲ್ಲಿ ಸರ್ಕಾರವು ಕೈಗೊಂಡ ಕ್ರಮಗಳೇನು? ಎಂದು ವಿಧಾನಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಕಂದಾಯ ಸಚಿವರಿಗೆ ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡರವರು ಭೂ ಕಬಳಿಕೆ ಮತ್ತು ಕೆರೆ ಒತ್ತುವರಿ ಮಾಡಿರುವವರ ವಿರುದ್ಧ ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ಕಲಂ 192 (ಎ) (1) ರಂತೆ ಕ್ರಮ ಕೈಗೊಂಡು ಒತ್ತುವರಿಯನ್ನು ತೆರವುಗೊಳಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಬೆಳ್ತಂಗಡಿ ತಾಲ್ಲೂಕಿಗೆ ಸಂಬಂದಿಸಿದಂತೆ ಒತ್ತುವರಿ ಕಟ್ಟಡ ಇರುವುದಿಲ್ಲ ಹಾಗೂ ಕೃಷಿಯೇತರ ಚಟುವಟಿಕೆಗಳ ಪಾಲಾಗುತ್ತಿರುವುದಿಲ್ಲ. ಸದರಿ ಕೆರೆಗಳ ತೆರವಿಗೆ ಲೋಕಾಯುಕ್ತವು ಸ್ವಂಪ್ರೇರಿತ ದೂರು ದಾಖಲಿಸಿದ್ದು, ಈ ಸಂಬಂಧ ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಪಟ್ಟಣ ಪಂಚಾಯತ್ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಗಿದೆ ಎಂದು ತಿಳಿಸಿದರು.

Related posts

ಶಾಸಕ ಹರೀಶ್ ಪೂಂಜರನ್ನು ಬಂಧಿಸದಂತೆ ಹಾಗೂ ನೋಟಿಸ್ ನೀಡದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಕರ್ನಾಟಕ ಹೈಕೋರ್ಟ್

Suddi Udaya

ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ತಣ್ಣೀರುಪಂತದ ವಿನ್ಯಾ ಪಿ.ಸಿ ಪ್ರಥಮ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

Suddi Udaya

ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

Suddi Udaya

ಯುವಶಕ್ತಿ ಫ್ರೆಂಡ್ಸ್ ನ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೈಸೂರಿನಲ್ಲಿ ಬಾಲಕಿಯರ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ಜಿದ್ದಾಜಿದ್ದಿನ ಪಂದ್ಯಾವಳಿಯಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆ

Suddi Udaya
error: Content is protected !!