September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗ್ರಾ.ಪಂ. ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಬಗ್ಗೆ ಮಾರ್ಚ್ 1ರಿಂದ ರಾಜ್ಯಾದ್ಯಂತ ಪ್ರತಿಭಟನೆ: ಸಾರ್ವಜನಿಕ ಮಹತ್ವದ ವಿಚಾರದ ಬಗ್ಗೆ ವಿಧಾನಸಭೆ ಸಭಾಪತಿಯವರಿಗೆ ಪತ್ರ

ಬೆಳ್ತಂಗಡಿ: ಗ್ರಾಮ ಪಂಚಾಯಿತಿ ನೌಕರರು ತಮಗೆ ಆಗುತ್ತಿರುವ ಶೋಷಣೆ ಮತ್ತು ಸಮಸ್ಯೆಗಳಿದ್ದ ಜನರ ಸೇವೆಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕಚೇರಿಯಲ್ಲಿ ಕಪ್ಪು ಪಟ್ಟಿ ಧರಿಸಿ ಇಲಾಖೆಯಿಂದ ಬೇಡಿಕೆ ಈಡೇರುವ ವರೆಗೂ ಮಾರ್ಚ್ 1ರಿಂದ ಶಾಂತಿಯುತ ಪ್ರತಿಭಟನೆ ನಡೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಡಾ. ದೇವಿಪ್ರಸಾದ್ ಬೊಲ್ಮ ತಿಳಿಸಿದ್ದಾರೆ.

ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು ಹಾಗೂ ಸಿಬ್ಬಂದಿ ಹಲವು ವರ್ಷಗಳಿಂದ ಸಂಘಟನೆಯ ಮೂಲಕ ಇಲಾಖೆಗೆ ಹಲವು ಬೇಡಿಕೆಗಳನ್ನು ಮಂಡಿಸುತ್ತಾ ಬಂದಿದ್ದಾರೆ. ಆದರೆ ಇಲಾಖೆಯು ನೌಕರರ ಮೂಲ ಬೇಡಿಕೆಗಳಾದ ಸಿ ಮತ್ತು ಡಿ ದರ್ಜೆಯ ಸ್ಥಾನಮಾನ, ವೇತನ ಶ್ರೇಣಿ ಆರೋಗ್ಯಭದ್ರತೆ ಅನುಮೋದನೆ ಆಗದಿರುವ ಬಗ್ಗೆ, ನೌಕರರಿಗೆ ಸೇವಾ ಭದ್ರತೆ, ಡಾಟಾ ಎಂಟ್ರಿ ಆಪರೇಟಿವ್ ಅನುಮೋದನೆ ಸಮಸ್ಯೆ, ಸಕಾಲದಲ್ಲಿ ಮುಂಬಡ್ತಿ ನಿವೃತ್ತಿಯಲ್ಲಿ ಆರ್ಥಿಕ ಭದ್ರತೆಗಳನ್ನು ಈಡೇರಿಸದೆ ನೌಕರರನ್ನು ಹಗಲಿರಲಿಸಿಕೊಳ್ಳುತ್ತಿದ್ದು ನೌಕರರು ಶೋಷಣೆಗಳಿಗಾಗುತ್ತಿದ್ದಾರೆ ಅಲ್ಲದೆ ಆರೋಗ್ಯಭದ್ರತೆ ಇಲ್ಲದೆ ಒತ್ತಡದಿಂದ ಕಾರ್ಯನಿರ್ಸುತ್ತಿದ್ದಾರೆ ಎಂದು ರಾಜ್ಯಾಧ್ಯಕ್ಷ ದೂರಿದ್ದಾರೆ. ಗ್ರಾಮ ಪಂಚಾಯತ್ ನೌಕರರಿಗೆ ಕನಿಷ್ಠ ವೇತನದ ಬದಲು ಗ್ರಾಮೀಣ ಪಂಚಾಯತಿ ಇಲಾಖೆ ಅಡಿಯಲ್ಲಿ ಸಿ ಮತ್ತು ಡಿ ದರ್ಜೆಯ ವೇತನ ನಿಗದಿಪಡಿಸಬೇಕು ಆರೋಗ್ಯಭದ್ರತೆ ನಿವೃತ್ತಿ ಉಪಧನ ಮಂಜೂರು ಮಾಡಬೇಕು, ಅನುಮೋದನೆಯಾಗದ ಎಲ್ಲಾ ನೌಕರರಿಗೆ ಅನುಮೋದನೆ ಒದಗಿಸುವುದು ಹಾಗೂ ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗೆ ಮುಂಬಡ್ತಿ ನೀಡಬೇಕೆಂದು ಅವರು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಅವರಿಗೆ ಒತ್ತಾಯಿಸಿದ್ದಾರೆ.

ಈ ಬಗ್ಗೆ ಉಡುಪಿ ದಕ್ಷಿಣ ಕನ್ನಡ ಜಿಲ್ಲೆ ಸ್ಥಳೀಯ ಸಂಸ್ಥೆಗಳ ಶಾಸಕ ಮಂಜುನಾಥ ಭಂಡಾರಿ ಯವರು ಸಭಾಪತಿಯವರು ಕರ್ನಾಟಕ ವಿಧಾನ ಪರಿಷತ್ ಬೆಂಗಳೂರು ಇವರಿಗೆ ನೌಕರರ ನ್ಯಾಯದ ಬೇಡಿಕೆಯನ್ನು ಪರಿಶೀಲಿಸಲು ವಿಲಾಸ ಸಮಿತಿಯನ್ನು ನೇಮಿಸಿ ಸಮಿತಿಯ ವರದಿಯನ್ನಾಧರಿಸಿ ಸೂಕ್ತ ಕ್ರಮಕೈಗೊಳ್ಳಲು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಮಂತ್ರಿಗಳನ್ನು ಒತ್ತಾಯಿಸಲು ಸಾರ್ವಜನಿಕ ಮಹತ್ವದ ಜರೂರು ವಿಷಯವನ್ನು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಲು ಅನುಮತಿ ಕೋರಿ ಮನವಿಯನ್ನು ನೀಡಿದ್ದಾರೆ.

Related posts

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಧರ್ಮಸ್ಥಳದ ಭಕ್ತರಿಂದ ನೇತ್ರಾವತಿ ನದಿಗೆ ಬಾಗಿನ ಅರ್ಪಣೆ

Suddi Udaya

ಫೆ.3: ಬೆಳ್ತಂಗಡಿ ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ತೆಕ್ಕಾರು: ಪಿಕಪ್ ವಾಹನ ಪಲ್ಟಿ: ಚಾಲಕ ಸಾವು

Suddi Udaya

ಗೇರುಕಟ್ಟೆ : ಪರಪ್ಪು ಈದ್ ಮಿಲಾದ್ ಸ್ವಾಗತ ಸಮಿತಿಯಿಂದ ಕಳಿಯ ಗ್ರಾ.ಪಂ., ರಿಕ್ಷಾ ಚಾಲಕರ ಸಂಘ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ

Suddi Udaya
error: Content is protected !!