23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ

ಕಾಯರ್ತ್ತಡ್ಕ : ಜೆ ಸಿ ಐ ಕೊಕ್ಕಡ ಕಪಿಲ ಘಟಕ ಇದರ ವತಿಯಿಂದ ದಿವ್ಯಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತ್ತಡ್ಕ ಇಲ್ಲಿನ ವಿದ್ಯಾರ್ಥಿಗಳಿಗೆ ಗೆಲುವಿಗೆ ಇನ್ನೊಂದೇ ಮೆಟ್ಟಿಲು ಎಂಬ ಶೀರ್ಷಿಕೆಯ ಅಡಿಯಲ್ಲಿ ಪರೀಕ್ಷೆ ಎದುರಿಸುವುದು ಹೇಗೆ ಎಂಬ ತರಬೇತಿ ಕಾರ್ಯಕ್ರಮ ಆಯೋಜಿಸಲಾಯಿತು.

ಈ ತರಬೇತಿ ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಯಾದ ಜೆ ಸಿ ಐ ವಲಯ ತರಬೇತಿದಾರರಾದ ಜೆಸಿಐ ಸೀನಿಯರ್ ಪ್ರದೀಪ್ ಬಾಕಿಲ ನಡೆಸಿಕೊಟ್ಟರು.

ವೇದಿಕೆಯಲ್ಲಿ ಅಧ್ಯಕ್ಷರಾದ ಜೆ ಸಿ ಎಚ್‌ ಜಿ ಎಫ್ ಸಂತೋಷ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ, ಮುಖ್ಯ ಅತಿಥಿಯಾದ ಸಿ| ದಿವ್ಯ ಮರಿಯಾ ಮುಖ್ಯೋಪಾಧ್ಯಾಯರು ಕಾಯರ್ತ್ತಡ್ಕ, ಕಾರ್ಯಕ್ರಮದ ನಿರ್ದೇಶಕರಾದ ಜೆ ಸಿ ಪಿ ಟಿ ಸೆಬಾಸ್ಟಿನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪೂರ್ವ ಅಧ್ಯಕ್ಷರಾದ ಜೆ ಸಿ ಜೆ ಎಫ್ ಎಂ ಕೆ ಶ್ರೀಧರ್ ರಾವ್, ಕೋಶಾಧಿಕಾರಿ ವಿದ್ಯೇಂದ್ರ ಹಾಗೂ ಪ್ರಿಯಾ ಜೆ ಅಮೀನ್, ಶಾಲೆಯ ಶಿಕ್ಷಕ ವೃಂದ ಆಡಳಿತ ಮಂಡಳಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ಜೆಸಿ ಜಾನ್ಸನ್ ವಿತರಿಸಿದರು. ಜೆಸಿ ವಾಣಿ ಜೆಸಿ ಶ್ರವಣ್ ವಾಚಿಸಿದರು. ಜೆಸಿ ಎಚ್ ಜಿ ಎಫ್ ಸಂತೋಷ್ ಜೈನ್ ಸ್ವಾಗತಿಸಿ, ಜೆ ಸಿ ಪಿಟಿ ಸೆಬಾಸ್ಟಿನ್ ಧನ್ಯವಾದವಿತ್ತರು.

Related posts

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ನವದುರ್ಗಾ ಹೋಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ

Suddi Udaya

ಪದ್ಮುಂಜ ದಾಮೋದರ ನಾಯ್ಕ್ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಕರ್ನಾಟಕ ಮಿನಿ ಕ್ರೀಡಾಕೂಟ ಅಥ್ಲೆಟಿಕ್ಸ್ ಸ್ಪರ್ಧೆ : 100 ಮೀ. ಓಟದಲ್ಲಿ ಚಿನ್ನ ಗೆದ್ದ ಅದ್ವಿಕಾ ಕೆಪಿ

Suddi Udaya

ನಡ: ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ನಿಧನ

Suddi Udaya

ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆ

Suddi Udaya
error: Content is protected !!