September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ

ಕಾಯರ್ತ್ತಡ್ಕ : ಜೆ ಸಿ ಐ ಕೊಕ್ಕಡ ಕಪಿಲ ಘಟಕ ಇದರ ವತಿಯಿಂದ ದಿವ್ಯಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತ್ತಡ್ಕ ಇಲ್ಲಿನ ವಿದ್ಯಾರ್ಥಿಗಳಿಗೆ ಗೆಲುವಿಗೆ ಇನ್ನೊಂದೇ ಮೆಟ್ಟಿಲು ಎಂಬ ಶೀರ್ಷಿಕೆಯ ಅಡಿಯಲ್ಲಿ ಪರೀಕ್ಷೆ ಎದುರಿಸುವುದು ಹೇಗೆ ಎಂಬ ತರಬೇತಿ ಕಾರ್ಯಕ್ರಮ ಆಯೋಜಿಸಲಾಯಿತು.

ಈ ತರಬೇತಿ ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಯಾದ ಜೆ ಸಿ ಐ ವಲಯ ತರಬೇತಿದಾರರಾದ ಜೆಸಿಐ ಸೀನಿಯರ್ ಪ್ರದೀಪ್ ಬಾಕಿಲ ನಡೆಸಿಕೊಟ್ಟರು.

ವೇದಿಕೆಯಲ್ಲಿ ಅಧ್ಯಕ್ಷರಾದ ಜೆ ಸಿ ಎಚ್‌ ಜಿ ಎಫ್ ಸಂತೋಷ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ, ಮುಖ್ಯ ಅತಿಥಿಯಾದ ಸಿ| ದಿವ್ಯ ಮರಿಯಾ ಮುಖ್ಯೋಪಾಧ್ಯಾಯರು ಕಾಯರ್ತ್ತಡ್ಕ, ಕಾರ್ಯಕ್ರಮದ ನಿರ್ದೇಶಕರಾದ ಜೆ ಸಿ ಪಿ ಟಿ ಸೆಬಾಸ್ಟಿನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪೂರ್ವ ಅಧ್ಯಕ್ಷರಾದ ಜೆ ಸಿ ಜೆ ಎಫ್ ಎಂ ಕೆ ಶ್ರೀಧರ್ ರಾವ್, ಕೋಶಾಧಿಕಾರಿ ವಿದ್ಯೇಂದ್ರ ಹಾಗೂ ಪ್ರಿಯಾ ಜೆ ಅಮೀನ್, ಶಾಲೆಯ ಶಿಕ್ಷಕ ವೃಂದ ಆಡಳಿತ ಮಂಡಳಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ಜೆಸಿ ಜಾನ್ಸನ್ ವಿತರಿಸಿದರು. ಜೆಸಿ ವಾಣಿ ಜೆಸಿ ಶ್ರವಣ್ ವಾಚಿಸಿದರು. ಜೆಸಿ ಎಚ್ ಜಿ ಎಫ್ ಸಂತೋಷ್ ಜೈನ್ ಸ್ವಾಗತಿಸಿ, ಜೆ ಸಿ ಪಿಟಿ ಸೆಬಾಸ್ಟಿನ್ ಧನ್ಯವಾದವಿತ್ತರು.

Related posts

ಗೇರುಕಟ್ಟೆ: ರೇಷ್ಮೆ ರೋಡ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

Suddi Udaya

ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು

Suddi Udaya

ಕುಕ್ಕೇಡಿ : ಗುಲಾಬಿ ಶೆಟ್ಟಿ ನಿಧನ

Suddi Udaya

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಮತ್ತು ಕಾಲೇಜು ಕೋರ್ಸುಗಳ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ನೇಮಕ

Suddi Udaya

ಜಿಲ್ಲಾ ಸಂಸ್ಕಾರ ಭಾರತೀ ವತಿಯಿಂದ ವೇಣೂರಿನ ಶ್ರೀ ವರ್ಧಮಾನ ಸ್ವಾಮಿ ಬಸದಿಯಲ್ಲಿ “ಸಂಸ್ಕಾರ ಸಿಂಧೂರ” ಚಿಂತನ ಮಂಥನ ಕಾರ್ಯಕ್ರಮ

Suddi Udaya
error: Content is protected !!