38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

ಬೆಳ್ತಂಗಡಿ: ರಾಜ್ಯದಲ್ಲಿ ನೀರಿನ ಆಶ್ರಯಕ್ಕೆ ಪಾರಂಪರಿಕವಾಗಿ ನಿರ್ಮಿಸಿದ ಬಹುತೇಕ ಕೆರೆಗಳು ರಾಜ್ಯಾದ್ಯಂತ ಒತ್ತುವರಿಗೊಂಡು ಕಟ್ಟಡ ಹಾಗೂ ಕೃಷಿಯೇತರ ಚಟುವಟಿಕೆಯ ಪಾಲಾಗಿರುವುದು ನಿಜವೇ; ಕೆರೆಗಳ ಒತ್ತುವರಿ ತೆರವಿಗೆ ಲೋಕಾಯುಕ್ತವು ಸೋಮೋಟೋ ಅಸ್ತ್ರ ಉಪಯೋಗಿಸಿದ್ದು ಬೆಳ್ತಂಗಡಿ ತಾಲ್ಲೂಕಿಗೆ ಸಂಬಂಧಿಸಿದಂತೆ ಪಟ್ಟಣ ಹಾಗೂ ತಾಲ್ಲೂಕಿನ 81 ಗ್ರಾಮಗಳಲ್ಲಿ ಸದ್ಯ 76 ಸಾರ್ವಜನಿಕ ಕೆರೆಗಳಿದ್ದು ಸದರಿ ಕೆರೆಗಳ ಒತ್ತುವರಿ ತಡೆಯುವ ನಿಟ್ಟಿನಲ್ಲಿ ಸರ್ಕಾರವು ಕೈಗೊಂಡ ಕ್ರಮಗಳೇನು? ಎಂದು ವಿಧಾನಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಕಂದಾಯ ಸಚಿವರಿಗೆ ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡರವರು ಭೂ ಕಬಳಿಕೆ ಮತ್ತು ಕೆರೆ ಒತ್ತುವರಿ ಮಾಡಿರುವವರ ವಿರುದ್ಧ ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ಕಲಂ 192 (ಎ) (1) ರಂತೆ ಕ್ರಮ ಕೈಗೊಂಡು ಒತ್ತುವರಿಯನ್ನು ತೆರವುಗೊಳಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಬೆಳ್ತಂಗಡಿ ತಾಲ್ಲೂಕಿಗೆ ಸಂಬಂದಿಸಿದಂತೆ ಒತ್ತುವರಿ ಕಟ್ಟಡ ಇರುವುದಿಲ್ಲ ಹಾಗೂ ಕೃಷಿಯೇತರ ಚಟುವಟಿಕೆಗಳ ಪಾಲಾಗುತ್ತಿರುವುದಿಲ್ಲ. ಸದರಿ ಕೆರೆಗಳ ತೆರವಿಗೆ ಲೋಕಾಯುಕ್ತವು ಸ್ವಂಪ್ರೇರಿತ ದೂರು ದಾಖಲಿಸಿದ್ದು, ಈ ಸಂಬಂಧ ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಪಟ್ಟಣ ಪಂಚಾಯತ್ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಗಿದೆ ಎಂದು ತಿಳಿಸಿದರು.

Related posts

ಫೆ.4 – 5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರದಲ್ಲಿ 10ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಭಾರಿ ಮಳೆ ನಾಳೆ (ಜೂ.27) ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 58ನೇ ಪಟ್ಟಾಭಿಷೇಕದ ಪ್ರಯುಕ್ತ ಕಳೆಂಜ ಗೋಶಾಲೆಯ ಆವರಣದಲ್ಲಿ ಹಣ್ಣು ಹಂಪಲು ಗಿಡ ಮತ್ತು ಹಸಿರು ಹುಲ್ಲು ನಾಟಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿಎಂಬ್ರಾಡರಿ ಮತ್ತು ಫ್ಯಾಬ್ರಿಕ್ ಪೇಟಿಂಗ್ ತರಬೇತಿಯ ಸಮಾರೋಪ

Suddi Udaya

ಮೇ 22: ಎಕ್ಸೆಲ್ ಅಕ್ಷರೋತ್ಸವ; ರಾಜ್ಯಮಟ್ಟದ ಕವಿಗೋಷ್ಠಿಗೆ ಆಹ್ವಾನ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!