22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

ಬೆಳ್ತಂಗಡಿ: ರಾಜ್ಯದಲ್ಲಿ ನೀರಿನ ಆಶ್ರಯಕ್ಕೆ ಪಾರಂಪರಿಕವಾಗಿ ನಿರ್ಮಿಸಿದ ಬಹುತೇಕ ಕೆರೆಗಳು ರಾಜ್ಯಾದ್ಯಂತ ಒತ್ತುವರಿಗೊಂಡು ಕಟ್ಟಡ ಹಾಗೂ ಕೃಷಿಯೇತರ ಚಟುವಟಿಕೆಯ ಪಾಲಾಗಿರುವುದು ನಿಜವೇ; ಕೆರೆಗಳ ಒತ್ತುವರಿ ತೆರವಿಗೆ ಲೋಕಾಯುಕ್ತವು ಸೋಮೋಟೋ ಅಸ್ತ್ರ ಉಪಯೋಗಿಸಿದ್ದು ಬೆಳ್ತಂಗಡಿ ತಾಲ್ಲೂಕಿಗೆ ಸಂಬಂಧಿಸಿದಂತೆ ಪಟ್ಟಣ ಹಾಗೂ ತಾಲ್ಲೂಕಿನ 81 ಗ್ರಾಮಗಳಲ್ಲಿ ಸದ್ಯ 76 ಸಾರ್ವಜನಿಕ ಕೆರೆಗಳಿದ್ದು ಸದರಿ ಕೆರೆಗಳ ಒತ್ತುವರಿ ತಡೆಯುವ ನಿಟ್ಟಿನಲ್ಲಿ ಸರ್ಕಾರವು ಕೈಗೊಂಡ ಕ್ರಮಗಳೇನು? ಎಂದು ವಿಧಾನಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಕಂದಾಯ ಸಚಿವರಿಗೆ ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡರವರು ಭೂ ಕಬಳಿಕೆ ಮತ್ತು ಕೆರೆ ಒತ್ತುವರಿ ಮಾಡಿರುವವರ ವಿರುದ್ಧ ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ಕಲಂ 192 (ಎ) (1) ರಂತೆ ಕ್ರಮ ಕೈಗೊಂಡು ಒತ್ತುವರಿಯನ್ನು ತೆರವುಗೊಳಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಬೆಳ್ತಂಗಡಿ ತಾಲ್ಲೂಕಿಗೆ ಸಂಬಂದಿಸಿದಂತೆ ಒತ್ತುವರಿ ಕಟ್ಟಡ ಇರುವುದಿಲ್ಲ ಹಾಗೂ ಕೃಷಿಯೇತರ ಚಟುವಟಿಕೆಗಳ ಪಾಲಾಗುತ್ತಿರುವುದಿಲ್ಲ. ಸದರಿ ಕೆರೆಗಳ ತೆರವಿಗೆ ಲೋಕಾಯುಕ್ತವು ಸ್ವಂಪ್ರೇರಿತ ದೂರು ದಾಖಲಿಸಿದ್ದು, ಈ ಸಂಬಂಧ ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಪಟ್ಟಣ ಪಂಚಾಯತ್ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಗಿದೆ ಎಂದು ತಿಳಿಸಿದರು.

Related posts

ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇದರ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ಬೆಳ್ತಂಗಡಿ ಜೆಸಿಐ ವತಿಯಿಂದ ಎಕ್ಸೆಲ್ ಕಾಲೇಜಿನ ಚೇರ್ಮನ್ ಸುಮಂತ್ ಕುಮಾರ್ ಜೈನ್ ರಿಗೆ ಅಭಿನಂದನೆ

Suddi Udaya

ಗಾಳಿ ಮಳೆಗೆ ಸವಣಾಲು ಬೇಬಿಯವರ ಮನೆಗೆ ಹಾನಿ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ “ಅಕ್ಷಯ ಪಾಕಶಾಲೆ” ಶಾಸಕ ಹರೀಶ್ ಪೂಂಜರಿಂದ ಲೋಕಾರ್ಪಣೆ: ಸಂಘದಿಂದ ರೂ. 70 ಸಾವಿರ ವೈದ್ಯಕೀಯ ನೆರವು

Suddi Udaya

ಮುಂಡಾಜೆ: ಮದಿಮಾಲ್ ಕಟ್ಟೆ ಜಾನಕಿ ರವರ ಮನೆಯಲ್ಲಿ ಪಾದಾಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆ

Suddi Udaya
error: Content is protected !!