September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

ಬೆಳ್ತಂಗಡಿ: ರಾಜ್ಯದಲ್ಲಿ ನೀರಿನ ಆಶ್ರಯಕ್ಕೆ ಪಾರಂಪರಿಕವಾಗಿ ನಿರ್ಮಿಸಿದ ಬಹುತೇಕ ಕೆರೆಗಳು ರಾಜ್ಯಾದ್ಯಂತ ಒತ್ತುವರಿಗೊಂಡು ಕಟ್ಟಡ ಹಾಗೂ ಕೃಷಿಯೇತರ ಚಟುವಟಿಕೆಯ ಪಾಲಾಗಿರುವುದು ನಿಜವೇ; ಕೆರೆಗಳ ಒತ್ತುವರಿ ತೆರವಿಗೆ ಲೋಕಾಯುಕ್ತವು ಸೋಮೋಟೋ ಅಸ್ತ್ರ ಉಪಯೋಗಿಸಿದ್ದು ಬೆಳ್ತಂಗಡಿ ತಾಲ್ಲೂಕಿಗೆ ಸಂಬಂಧಿಸಿದಂತೆ ಪಟ್ಟಣ ಹಾಗೂ ತಾಲ್ಲೂಕಿನ 81 ಗ್ರಾಮಗಳಲ್ಲಿ ಸದ್ಯ 76 ಸಾರ್ವಜನಿಕ ಕೆರೆಗಳಿದ್ದು ಸದರಿ ಕೆರೆಗಳ ಒತ್ತುವರಿ ತಡೆಯುವ ನಿಟ್ಟಿನಲ್ಲಿ ಸರ್ಕಾರವು ಕೈಗೊಂಡ ಕ್ರಮಗಳೇನು? ಎಂದು ವಿಧಾನಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಕಂದಾಯ ಸಚಿವರಿಗೆ ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡರವರು ಭೂ ಕಬಳಿಕೆ ಮತ್ತು ಕೆರೆ ಒತ್ತುವರಿ ಮಾಡಿರುವವರ ವಿರುದ್ಧ ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ಕಲಂ 192 (ಎ) (1) ರಂತೆ ಕ್ರಮ ಕೈಗೊಂಡು ಒತ್ತುವರಿಯನ್ನು ತೆರವುಗೊಳಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಬೆಳ್ತಂಗಡಿ ತಾಲ್ಲೂಕಿಗೆ ಸಂಬಂದಿಸಿದಂತೆ ಒತ್ತುವರಿ ಕಟ್ಟಡ ಇರುವುದಿಲ್ಲ ಹಾಗೂ ಕೃಷಿಯೇತರ ಚಟುವಟಿಕೆಗಳ ಪಾಲಾಗುತ್ತಿರುವುದಿಲ್ಲ. ಸದರಿ ಕೆರೆಗಳ ತೆರವಿಗೆ ಲೋಕಾಯುಕ್ತವು ಸ್ವಂಪ್ರೇರಿತ ದೂರು ದಾಖಲಿಸಿದ್ದು, ಈ ಸಂಬಂಧ ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಪಟ್ಟಣ ಪಂಚಾಯತ್ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಗಿದೆ ಎಂದು ತಿಳಿಸಿದರು.

Related posts

ಲಾಯಿಲದಲ್ಲಿ ಕೆಟ್ಟು ನಿಂತ ಕೆಎಸ್ ಆರ್ ಟಿ ಸಿ ಬಸ್ಸು: ಟ್ರಾಫಿಕ್ ಜಾಮ್

Suddi Udaya

ಬಜಿರೆ: ಶ್ಯಾಮ ಹೆಗ್ಡೆ ಪೊಂಗರ್ತ್ಯಾರ್ ನಿಧನ

Suddi Udaya

ಧರ್ಮಸ್ಥಳ : ಮುಂಡ್ರುಪ್ಪಾಡಿ ನಿವಾಸಿ ಹರೀಶ್ ಎಮ್.ಎಲ್. ನಿಧನ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ; ಕಿರಿಯಾಡಿ ಭಜನಾ ಮಂಡಳಿ ಸದಸ್ಯರಿಂದ ಶ್ರಮದಾನ

Suddi Udaya

ನಾರಾವಿ ಗ್ರಾಮ ಸಭೆ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರ ಚರ್ಚೆ

Suddi Udaya
error: Content is protected !!