25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮುಂಡಾಜೆ ಶಾಲಾ ವಿದ್ಯಾರ್ಥಿಗಳಾದ ಚಿನ್ಮಯಿ, ಸಮೃದ್ಧಿರವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

ಮುಂಡಾಜೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಮಂಗಳೂರಿನ ಪಿಲಿಕುಲದಲ್ಲಿ ನಡೆದ ಬುಲ್ ಬುಲ್ ಚತುರ್ಥ ಚರಣ (ಹೀರಕ್ಗರಿ) ಪರೀಕ್ಷೆಯಲ್ಲಿ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ, ಮುಂಡಾಜೆಯ 5ನೇ ತರಗತಿ ವಿದ್ಯಾರ್ಥಿನಿಯಾದ ಚಿನ್ಮಯಿ ಮತ್ತು ಸ. ಹಿ. ಪ್ರಾ. ಶಾಲೆ, ಮುಂಡಾಜೆಯ 7ನೇ ತರಗತಿ ವಿದ್ಯಾರ್ಥಿನಿಯಾದ ಸಮೃದ್ಧಿ ಈ ಇಬ್ಬರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.

ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಬೆಂಗಳೂರು ರಾಜ ಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ರವರು ನೆರವೇರಿಸಿದರು. ಇವರಿಗೆ ಬುಲ್ ಬುಲ್ ವಿಭಾಗ ಶಿಕ್ಷಕಿ ಸೇವಂತಿ ಬಿ. (Pre. ALT Bulbul) ರವರು ಮಾರ್ಗದರ್ಶನ ನೀಡಿರುತ್ತಾರೆ.
ಚಿನ್ಮಯಿ ಇವರು ಕಾನರ್ಪ ಕಡಿರುದ್ಯಾವರದ ಲತಾ ಮತ್ತು ಕಿರಣ್ ರವರ ಪುತ್ರಿ ಮತ್ತು ಸಮೃದ್ಧಿ ಇವರು ಎರ್ಮಾಳ್ ಪಲ್ಕೆ ಸವಿತಾ ಎ.ಪಿ ಮತ್ತು ದೇಜಪ್ಪರವರ ಪುತ್ರಿ.

Related posts

ಉಜಿರೆ ಮೈಸೂರು ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ರತಿ ರೂ 1 ಸಾವಿರ ಖರೀದಿಯೊಂದಿಗೆ ಆಕರ್ಷಕ ಗಿಪ್ಟ್

Suddi Udaya

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ

Suddi Udaya

ಬಟ್ಟೆಗಳ ಬೃಹತ್ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ ಶೇ.10 ಡಿಸ್ಕೌಂಟ್ ಸೇಲ್

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ತೆಕ್ಕಾರು ಗ್ರಾಮದಲ್ಲಿ ರಾತ್ರಿ ವೇಳೆ ಕಣ್ಣಾ ಮುಚ್ಚಾಲೆ ಆಡುತ್ತಿರುವ ವಿದ್ಯುತ್

Suddi Udaya
error: Content is protected !!