26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮುಂಡಾಜೆ ಶಾಲಾ ವಿದ್ಯಾರ್ಥಿಗಳಾದ ಚಿನ್ಮಯಿ, ಸಮೃದ್ಧಿರವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

ಮುಂಡಾಜೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಮಂಗಳೂರಿನ ಪಿಲಿಕುಲದಲ್ಲಿ ನಡೆದ ಬುಲ್ ಬುಲ್ ಚತುರ್ಥ ಚರಣ (ಹೀರಕ್ಗರಿ) ಪರೀಕ್ಷೆಯಲ್ಲಿ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ, ಮುಂಡಾಜೆಯ 5ನೇ ತರಗತಿ ವಿದ್ಯಾರ್ಥಿನಿಯಾದ ಚಿನ್ಮಯಿ ಮತ್ತು ಸ. ಹಿ. ಪ್ರಾ. ಶಾಲೆ, ಮುಂಡಾಜೆಯ 7ನೇ ತರಗತಿ ವಿದ್ಯಾರ್ಥಿನಿಯಾದ ಸಮೃದ್ಧಿ ಈ ಇಬ್ಬರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.

ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಬೆಂಗಳೂರು ರಾಜ ಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ರವರು ನೆರವೇರಿಸಿದರು. ಇವರಿಗೆ ಬುಲ್ ಬುಲ್ ವಿಭಾಗ ಶಿಕ್ಷಕಿ ಸೇವಂತಿ ಬಿ. (Pre. ALT Bulbul) ರವರು ಮಾರ್ಗದರ್ಶನ ನೀಡಿರುತ್ತಾರೆ.
ಚಿನ್ಮಯಿ ಇವರು ಕಾನರ್ಪ ಕಡಿರುದ್ಯಾವರದ ಲತಾ ಮತ್ತು ಕಿರಣ್ ರವರ ಪುತ್ರಿ ಮತ್ತು ಸಮೃದ್ಧಿ ಇವರು ಎರ್ಮಾಳ್ ಪಲ್ಕೆ ಸವಿತಾ ಎ.ಪಿ ಮತ್ತು ದೇಜಪ್ಪರವರ ಪುತ್ರಿ.

Related posts

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯ ಅಮೋಘ ಸಾಧನೆ- ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿದ ಪ್ರಾರ್ಥನಾ

Suddi Udaya

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

Suddi Udaya

ನಡ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!