July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮುಂಡಾಜೆ ಶಾಲಾ ವಿದ್ಯಾರ್ಥಿಗಳಾದ ಚಿನ್ಮಯಿ, ಸಮೃದ್ಧಿರವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

ಮುಂಡಾಜೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಮಂಗಳೂರಿನ ಪಿಲಿಕುಲದಲ್ಲಿ ನಡೆದ ಬುಲ್ ಬುಲ್ ಚತುರ್ಥ ಚರಣ (ಹೀರಕ್ಗರಿ) ಪರೀಕ್ಷೆಯಲ್ಲಿ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ, ಮುಂಡಾಜೆಯ 5ನೇ ತರಗತಿ ವಿದ್ಯಾರ್ಥಿನಿಯಾದ ಚಿನ್ಮಯಿ ಮತ್ತು ಸ. ಹಿ. ಪ್ರಾ. ಶಾಲೆ, ಮುಂಡಾಜೆಯ 7ನೇ ತರಗತಿ ವಿದ್ಯಾರ್ಥಿನಿಯಾದ ಸಮೃದ್ಧಿ ಈ ಇಬ್ಬರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.

ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಬೆಂಗಳೂರು ರಾಜ ಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ರವರು ನೆರವೇರಿಸಿದರು. ಇವರಿಗೆ ಬುಲ್ ಬುಲ್ ವಿಭಾಗ ಶಿಕ್ಷಕಿ ಸೇವಂತಿ ಬಿ. (Pre. ALT Bulbul) ರವರು ಮಾರ್ಗದರ್ಶನ ನೀಡಿರುತ್ತಾರೆ.
ಚಿನ್ಮಯಿ ಇವರು ಕಾನರ್ಪ ಕಡಿರುದ್ಯಾವರದ ಲತಾ ಮತ್ತು ಕಿರಣ್ ರವರ ಪುತ್ರಿ ಮತ್ತು ಸಮೃದ್ಧಿ ಇವರು ಎರ್ಮಾಳ್ ಪಲ್ಕೆ ಸವಿತಾ ಎ.ಪಿ ಮತ್ತು ದೇಜಪ್ಪರವರ ಪುತ್ರಿ.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕ ಸಂಭ್ರಮಾಚರಣೆ

Suddi Udaya

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಮರಗಳು ಉರುಳಿ ಎರಡು ಗಂಟೆ ಟ್ರಾಫಿಕ್ ಜಾಮ್- ವಾಹನ ಸವಾರರ ಪರದಾಟ- ಮರಗಳು ತೆರವು

Suddi Udaya

ಕಾಯರ್ತಡ್ಕದಲ್ಲಿ ಮಾರಕಾಯುಧದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ : ಗಂಭೀರ ಗಾಯಗೊಂಡ ರಾಜೇಶ್ ರವರ ಆರೋಗ್ಯ ವಿಚಾರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಇದರ ನೇತೃತ್ವ ರೂ. 6 ಕೋಟಿ ವೆಚ್ಚದ ನೂತನವಾಗಿ ನಿರ್ಮಿಸಲಾದ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾಸಂಸ್ಥೆಗಳ ನೂತನ ಕಟ್ಟಡ ಎ.20 ರಂದು ಶೃಂಗೇರಿ ಮಠದ ಶ್ರೀಮಜ್ಜದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿಯವರಿಂದ ಲೋಕಾರ್ಪಣೆ

Suddi Udaya
error: Content is protected !!