22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗ್ರಾ.ಪಂ. ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಬಗ್ಗೆ ಮಾರ್ಚ್ 1ರಿಂದ ರಾಜ್ಯಾದ್ಯಂತ ಪ್ರತಿಭಟನೆ: ಸಾರ್ವಜನಿಕ ಮಹತ್ವದ ವಿಚಾರದ ಬಗ್ಗೆ ವಿಧಾನಸಭೆ ಸಭಾಪತಿಯವರಿಗೆ ಪತ್ರ

ಬೆಳ್ತಂಗಡಿ: ಗ್ರಾಮ ಪಂಚಾಯಿತಿ ನೌಕರರು ತಮಗೆ ಆಗುತ್ತಿರುವ ಶೋಷಣೆ ಮತ್ತು ಸಮಸ್ಯೆಗಳಿದ್ದ ಜನರ ಸೇವೆಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕಚೇರಿಯಲ್ಲಿ ಕಪ್ಪು ಪಟ್ಟಿ ಧರಿಸಿ ಇಲಾಖೆಯಿಂದ ಬೇಡಿಕೆ ಈಡೇರುವ ವರೆಗೂ ಮಾರ್ಚ್ 1ರಿಂದ ಶಾಂತಿಯುತ ಪ್ರತಿಭಟನೆ ನಡೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಡಾ. ದೇವಿಪ್ರಸಾದ್ ಬೊಲ್ಮ ತಿಳಿಸಿದ್ದಾರೆ.

ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು ಹಾಗೂ ಸಿಬ್ಬಂದಿ ಹಲವು ವರ್ಷಗಳಿಂದ ಸಂಘಟನೆಯ ಮೂಲಕ ಇಲಾಖೆಗೆ ಹಲವು ಬೇಡಿಕೆಗಳನ್ನು ಮಂಡಿಸುತ್ತಾ ಬಂದಿದ್ದಾರೆ. ಆದರೆ ಇಲಾಖೆಯು ನೌಕರರ ಮೂಲ ಬೇಡಿಕೆಗಳಾದ ಸಿ ಮತ್ತು ಡಿ ದರ್ಜೆಯ ಸ್ಥಾನಮಾನ, ವೇತನ ಶ್ರೇಣಿ ಆರೋಗ್ಯಭದ್ರತೆ ಅನುಮೋದನೆ ಆಗದಿರುವ ಬಗ್ಗೆ, ನೌಕರರಿಗೆ ಸೇವಾ ಭದ್ರತೆ, ಡಾಟಾ ಎಂಟ್ರಿ ಆಪರೇಟಿವ್ ಅನುಮೋದನೆ ಸಮಸ್ಯೆ, ಸಕಾಲದಲ್ಲಿ ಮುಂಬಡ್ತಿ ನಿವೃತ್ತಿಯಲ್ಲಿ ಆರ್ಥಿಕ ಭದ್ರತೆಗಳನ್ನು ಈಡೇರಿಸದೆ ನೌಕರರನ್ನು ಹಗಲಿರಲಿಸಿಕೊಳ್ಳುತ್ತಿದ್ದು ನೌಕರರು ಶೋಷಣೆಗಳಿಗಾಗುತ್ತಿದ್ದಾರೆ ಅಲ್ಲದೆ ಆರೋಗ್ಯಭದ್ರತೆ ಇಲ್ಲದೆ ಒತ್ತಡದಿಂದ ಕಾರ್ಯನಿರ್ಸುತ್ತಿದ್ದಾರೆ ಎಂದು ರಾಜ್ಯಾಧ್ಯಕ್ಷ ದೂರಿದ್ದಾರೆ. ಗ್ರಾಮ ಪಂಚಾಯತ್ ನೌಕರರಿಗೆ ಕನಿಷ್ಠ ವೇತನದ ಬದಲು ಗ್ರಾಮೀಣ ಪಂಚಾಯತಿ ಇಲಾಖೆ ಅಡಿಯಲ್ಲಿ ಸಿ ಮತ್ತು ಡಿ ದರ್ಜೆಯ ವೇತನ ನಿಗದಿಪಡಿಸಬೇಕು ಆರೋಗ್ಯಭದ್ರತೆ ನಿವೃತ್ತಿ ಉಪಧನ ಮಂಜೂರು ಮಾಡಬೇಕು, ಅನುಮೋದನೆಯಾಗದ ಎಲ್ಲಾ ನೌಕರರಿಗೆ ಅನುಮೋದನೆ ಒದಗಿಸುವುದು ಹಾಗೂ ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗೆ ಮುಂಬಡ್ತಿ ನೀಡಬೇಕೆಂದು ಅವರು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಅವರಿಗೆ ಒತ್ತಾಯಿಸಿದ್ದಾರೆ.

ಈ ಬಗ್ಗೆ ಉಡುಪಿ ದಕ್ಷಿಣ ಕನ್ನಡ ಜಿಲ್ಲೆ ಸ್ಥಳೀಯ ಸಂಸ್ಥೆಗಳ ಶಾಸಕ ಮಂಜುನಾಥ ಭಂಡಾರಿ ಯವರು ಸಭಾಪತಿಯವರು ಕರ್ನಾಟಕ ವಿಧಾನ ಪರಿಷತ್ ಬೆಂಗಳೂರು ಇವರಿಗೆ ನೌಕರರ ನ್ಯಾಯದ ಬೇಡಿಕೆಯನ್ನು ಪರಿಶೀಲಿಸಲು ವಿಲಾಸ ಸಮಿತಿಯನ್ನು ನೇಮಿಸಿ ಸಮಿತಿಯ ವರದಿಯನ್ನಾಧರಿಸಿ ಸೂಕ್ತ ಕ್ರಮಕೈಗೊಳ್ಳಲು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಮಂತ್ರಿಗಳನ್ನು ಒತ್ತಾಯಿಸಲು ಸಾರ್ವಜನಿಕ ಮಹತ್ವದ ಜರೂರು ವಿಷಯವನ್ನು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಲು ಅನುಮತಿ ಕೋರಿ ಮನವಿಯನ್ನು ನೀಡಿದ್ದಾರೆ.

Related posts

ದೇಶದಲ್ಲಿ ನೋಂದಾವಣೆಯಾಗದಿರುವ ದೊಡ್ಡ ಸಂಸ್ಥೆ ಆರ್.ಎಸ್.ಎಸ್. ಮಾತ್ರ,: ಕೆಪಿಸಿಸಿ ವಕ್ತಾರ ಅಮಲ ರಾಮಚಂದ್ರ

Suddi Udaya

ಮರಳಿನ ತಾಯಿನಾಡು ದ.ಕ. ಜಿಲ್ಲೆಯಲ್ಲಿ ಮರಳು ಇಲ್ಲದೆ ಕಾರ್ಮಿಕರು ಬೀದಿಗೆ : ವಸಂತ ನಡ

Suddi Udaya

ಮಾಲಾಡಿ: ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ನಡುವೆ ಅಪಘಾತ

Suddi Udaya

ಬೆಳ್ತಂಗಡಿ : ಹೋಲಿ ರಿಡೀಮರ್ ಆಂ.ಮಾ. ಶಾಲಾ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮಿತ್ತಬಾಗಿಲು: ನೇತ್ರಾವತಿ ನದಿಯ ಕೊಪ್ಪದ ಗಂಡಿ ಸೇತುವೆ ಮುಳುಗಡೆ

Suddi Udaya
error: Content is protected !!