September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ

ಕಾಯರ್ತ್ತಡ್ಕ : ಜೆ ಸಿ ಐ ಕೊಕ್ಕಡ ಕಪಿಲ ಘಟಕ ಇದರ ವತಿಯಿಂದ ದಿವ್ಯಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತ್ತಡ್ಕ ಇಲ್ಲಿನ ವಿದ್ಯಾರ್ಥಿಗಳಿಗೆ ಗೆಲುವಿಗೆ ಇನ್ನೊಂದೇ ಮೆಟ್ಟಿಲು ಎಂಬ ಶೀರ್ಷಿಕೆಯ ಅಡಿಯಲ್ಲಿ ಪರೀಕ್ಷೆ ಎದುರಿಸುವುದು ಹೇಗೆ ಎಂಬ ತರಬೇತಿ ಕಾರ್ಯಕ್ರಮ ಆಯೋಜಿಸಲಾಯಿತು.

ಈ ತರಬೇತಿ ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಯಾದ ಜೆ ಸಿ ಐ ವಲಯ ತರಬೇತಿದಾರರಾದ ಜೆಸಿಐ ಸೀನಿಯರ್ ಪ್ರದೀಪ್ ಬಾಕಿಲ ನಡೆಸಿಕೊಟ್ಟರು.

ವೇದಿಕೆಯಲ್ಲಿ ಅಧ್ಯಕ್ಷರಾದ ಜೆ ಸಿ ಎಚ್‌ ಜಿ ಎಫ್ ಸಂತೋಷ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ, ಮುಖ್ಯ ಅತಿಥಿಯಾದ ಸಿ| ದಿವ್ಯ ಮರಿಯಾ ಮುಖ್ಯೋಪಾಧ್ಯಾಯರು ಕಾಯರ್ತ್ತಡ್ಕ, ಕಾರ್ಯಕ್ರಮದ ನಿರ್ದೇಶಕರಾದ ಜೆ ಸಿ ಪಿ ಟಿ ಸೆಬಾಸ್ಟಿನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪೂರ್ವ ಅಧ್ಯಕ್ಷರಾದ ಜೆ ಸಿ ಜೆ ಎಫ್ ಎಂ ಕೆ ಶ್ರೀಧರ್ ರಾವ್, ಕೋಶಾಧಿಕಾರಿ ವಿದ್ಯೇಂದ್ರ ಹಾಗೂ ಪ್ರಿಯಾ ಜೆ ಅಮೀನ್, ಶಾಲೆಯ ಶಿಕ್ಷಕ ವೃಂದ ಆಡಳಿತ ಮಂಡಳಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ಜೆಸಿ ಜಾನ್ಸನ್ ವಿತರಿಸಿದರು. ಜೆಸಿ ವಾಣಿ ಜೆಸಿ ಶ್ರವಣ್ ವಾಚಿಸಿದರು. ಜೆಸಿ ಎಚ್ ಜಿ ಎಫ್ ಸಂತೋಷ್ ಜೈನ್ ಸ್ವಾಗತಿಸಿ, ಜೆ ಸಿ ಪಿಟಿ ಸೆಬಾಸ್ಟಿನ್ ಧನ್ಯವಾದವಿತ್ತರು.

Related posts

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆ

Suddi Udaya

ಕಣಿಯೂರು ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿಗೆ ಶೇ. 98.8 ಫಲಿತಾಂಶ

Suddi Udaya

ಕುಸಿಯುವ ಮೊದಲು ಹೊಸ ಸೇತುವೆ ನಿರ್ಮಾಣವಾಗುವುದೇ…? ಚುನಾವಣೆ ಬಹಿಷ್ಕಾರ ಹಾಕಿದರೂ ಕ್ಯಾರೇ ಅನ್ನದ ಅಧಿಕಾರಿಗಳು…!!!

Suddi Udaya

ಗುರುವಾಯನಕೆರೆ: ಎಕ್ಸೆಲ್‌ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರು ನಮನ ಹಾಗೂ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಡಾ.ವೀಣಾ ಬನ್ನಂಜೆಯವರಿಗೆ ಗೌರವಾರ್ಪಣೆ

Suddi Udaya
error: Content is protected !!