25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಗಳಿಂದ ವಿಭಿನ್ನ ರೀತಿಯಲ್ಲಿ ಚಿಂತನಾ ದಿನಾಚರಣೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ಸ್ , ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಸ್ಕೌಟ್ ಗೈಡ್ ಸಂಸ್ಥಾಪಕರ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಿದರು.

ಮಕ್ಕಳ ಪೋಷಕರ ಹಾಗೂ ಶಿಕ್ಷಕರ ಮಧುಮೇಹ ಹಾಗೂ ರಕ್ತದೊತ್ತಡವನ್ನು ಉಚಿತವಾಗಿ ಪರೀಕ್ಷಿಸಿದರು. ಸುಮಾರು ನೂರಕ್ಕೂ ಅಧಿಕ ಪೋಷಕರು ಇದರ ಸಹಕಾರವನ್ನು ಪಡೆದುಕೊಂಡರು. ನಂತರ ಸರ್ವಧರ್ಮ ಪ್ರಾರ್ಥನೆಯ ಮೂಲಕ ಭಾವೈಕ್ಯತೆಯನ್ನು ಸಾರಿದರು. ತಾಲೂಕು ಆರೋಗ್ಯ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಿದರು. ಬೆಳ್ತಂಗಡಿ ಉದಯ ನಗರ ಸುದೆಮುಗೇರಿನಲ್ಲಿರುವ‌ ಅನುಗ್ರಹ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಹಣ್ಣು ಹಂಪಲು ಹಾಗೂ ಸಿಹಿಯನ್ನು ನೀಡಿ ವೃದ್ಧರೊಂದಿಗೆ ಸಮಯವನ್ನು ಕಳೆದರು. ಲಾಯಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡು ಬಡ ಕುಟುಂಬಗಳನ್ನು ಗುರುತಿಸಿ 52 ಕೆಜಿ ಅಕ್ಕಿಯನ್ನು ನೀಡಿದರು.


ಚಿಂತನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳಾದ ಶರತ್ ಶೆಟ್ಟಿ, ಗಣೇಶ್ ಲಾಯಿಲ ಭಾಗವಹಿಸಿದ್ದರು. ಮಕ್ಕಳು ತನಗೆ ಹೆತ್ತವರು ನೀಡಿದ ಪಾಕೆಟ್ ಹಣದ ಉಳಿಕೆಯಿಂದ ಈ ಕಾರ್ಯಗಳನ್ನೆಲ್ಲ ಸಾಧಿಸಲು ಸಾಧ್ಯವಾಯಿತು . ಸಮಾಜಕ್ಕೆ ತನ್ನ ಸೇವೆ, ಸಹಕಾರದಿಂದ ಸಹಬಾಳ್ವೆ ಎಂಬ ವಿಷಯವನ್ನು ಅರಿತುಕೊಂಡರು. ಜಿಲ್ಲಾ ಸಂಸ್ಥೆಯಿಂದ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ ಭಾಗವಹಿಸಿ ವಿಭಿನ್ನ ರೀತಿಯ ಚಿಂತನಾ ದಿನಾಚರಣೆಯ ಆಯೋಜನೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನಡೆಯುವ ಚಟುವಟಿಕೆಗಳ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು. ಗೈಡ್ ವಿದ್ಯಾರ್ಥಿಗಳಾದ ಪ್ರಾಪ್ತಿ ವಿ ಶೆಟ್ಟಿ ಹಾಗೂ ಸಿಂಚನ ನಿರೂಪಿಸಿದ ಕಾರ್ಯಕ್ರಮದಲ್ಲಿ ಗೈಡ್ ವಿದ್ಯಾರ್ಥಿ ಪ್ರಷ್ಯಾ ಸ್ವಾಗತಿಸಿ, ಶ್ರುತಾ ಶೆಟ್ಟಿ ವಂದಿಸಿದರು. ಸ್ಕೌಟ್ ಮಾಸ್ಟರ್ ಮಂಜುನಾಥ್ ಸಹಕರಿಸಿದರು. ಸಂಯೋಜಕ ಶಿಕ್ಷಕಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮ ಸಂಘಟಿಸಿ, ಯಶಸ್ವಿಗೊಳಿಸಿದರು.

Related posts

ಮುಂಡಾಜೆ: ನಿವೃತ್ತ ಅಧ್ಯಾಪಕ ಮೋಹನ್ ತಾಮನ್ಕರ್ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya

ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಸೌತಡ್ಕ: ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ರಾಷ್ಟ್ರೀಕೃತ ಬ್ಯಾಂಕ್‌ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್

Suddi Udaya

ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಮದ್ದಡ್ಕ: ಕಿನ್ನಿಗೋಳಿ ಎಂಬಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ

Suddi Udaya
error: Content is protected !!