25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

ಬೆಳ್ತಂಗಡಿ: ರಾಜ್ಯದಲ್ಲಿ ನೀರಿನ ಆಶ್ರಯಕ್ಕೆ ಪಾರಂಪರಿಕವಾಗಿ ನಿರ್ಮಿಸಿದ ಬಹುತೇಕ ಕೆರೆಗಳು ರಾಜ್ಯಾದ್ಯಂತ ಒತ್ತುವರಿಗೊಂಡು ಕಟ್ಟಡ ಹಾಗೂ ಕೃಷಿಯೇತರ ಚಟುವಟಿಕೆಯ ಪಾಲಾಗಿರುವುದು ನಿಜವೇ; ಕೆರೆಗಳ ಒತ್ತುವರಿ ತೆರವಿಗೆ ಲೋಕಾಯುಕ್ತವು ಸೋಮೋಟೋ ಅಸ್ತ್ರ ಉಪಯೋಗಿಸಿದ್ದು ಬೆಳ್ತಂಗಡಿ ತಾಲ್ಲೂಕಿಗೆ ಸಂಬಂಧಿಸಿದಂತೆ ಪಟ್ಟಣ ಹಾಗೂ ತಾಲ್ಲೂಕಿನ 81 ಗ್ರಾಮಗಳಲ್ಲಿ ಸದ್ಯ 76 ಸಾರ್ವಜನಿಕ ಕೆರೆಗಳಿದ್ದು ಸದರಿ ಕೆರೆಗಳ ಒತ್ತುವರಿ ತಡೆಯುವ ನಿಟ್ಟಿನಲ್ಲಿ ಸರ್ಕಾರವು ಕೈಗೊಂಡ ಕ್ರಮಗಳೇನು? ಎಂದು ವಿಧಾನಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಕಂದಾಯ ಸಚಿವರಿಗೆ ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡರವರು ಭೂ ಕಬಳಿಕೆ ಮತ್ತು ಕೆರೆ ಒತ್ತುವರಿ ಮಾಡಿರುವವರ ವಿರುದ್ಧ ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ಕಲಂ 192 (ಎ) (1) ರಂತೆ ಕ್ರಮ ಕೈಗೊಂಡು ಒತ್ತುವರಿಯನ್ನು ತೆರವುಗೊಳಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಬೆಳ್ತಂಗಡಿ ತಾಲ್ಲೂಕಿಗೆ ಸಂಬಂದಿಸಿದಂತೆ ಒತ್ತುವರಿ ಕಟ್ಟಡ ಇರುವುದಿಲ್ಲ ಹಾಗೂ ಕೃಷಿಯೇತರ ಚಟುವಟಿಕೆಗಳ ಪಾಲಾಗುತ್ತಿರುವುದಿಲ್ಲ. ಸದರಿ ಕೆರೆಗಳ ತೆರವಿಗೆ ಲೋಕಾಯುಕ್ತವು ಸ್ವಂಪ್ರೇರಿತ ದೂರು ದಾಖಲಿಸಿದ್ದು, ಈ ಸಂಬಂಧ ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಪಟ್ಟಣ ಪಂಚಾಯತ್ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಗಿದೆ ಎಂದು ತಿಳಿಸಿದರು.

Related posts

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಕೆಸರ್ದ ಕಂಡೊಂಡು ಕುಸಲ್ದ ಗೊಬ್ಬುಲು ಕಾರ್ಯಕ್ರಮದ ಉದ್ಘಾಟನೆ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

Suddi Udaya

ವೇಣೂರು: ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ನೂರುಲ್ ಹುದಾ ದರ್ಸ್ ಪ್ರಾರಂಭೋತ್ಸವ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya

ಬಿಜೆಪಿ ಚಾರ್ಮಾಡಿ ಶಕ್ತಿಕೇಂದ್ರದ ಬೂತ್ ಮಟ್ಟದ ಯುವ ಮೋರ್ಚಾ ಸಂಚಾಲಕರ ಆಯ್ಕೆ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಆಷಾಢ & ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya
error: Content is protected !!