September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

ಬೆಳ್ತಂಗಡಿ: ರಾಜ್ಯದಲ್ಲಿ ನೀರಿನ ಆಶ್ರಯಕ್ಕೆ ಪಾರಂಪರಿಕವಾಗಿ ನಿರ್ಮಿಸಿದ ಬಹುತೇಕ ಕೆರೆಗಳು ರಾಜ್ಯಾದ್ಯಂತ ಒತ್ತುವರಿಗೊಂಡು ಕಟ್ಟಡ ಹಾಗೂ ಕೃಷಿಯೇತರ ಚಟುವಟಿಕೆಯ ಪಾಲಾಗಿರುವುದು ನಿಜವೇ; ಕೆರೆಗಳ ಒತ್ತುವರಿ ತೆರವಿಗೆ ಲೋಕಾಯುಕ್ತವು ಸೋಮೋಟೋ ಅಸ್ತ್ರ ಉಪಯೋಗಿಸಿದ್ದು ಬೆಳ್ತಂಗಡಿ ತಾಲ್ಲೂಕಿಗೆ ಸಂಬಂಧಿಸಿದಂತೆ ಪಟ್ಟಣ ಹಾಗೂ ತಾಲ್ಲೂಕಿನ 81 ಗ್ರಾಮಗಳಲ್ಲಿ ಸದ್ಯ 76 ಸಾರ್ವಜನಿಕ ಕೆರೆಗಳಿದ್ದು ಸದರಿ ಕೆರೆಗಳ ಒತ್ತುವರಿ ತಡೆಯುವ ನಿಟ್ಟಿನಲ್ಲಿ ಸರ್ಕಾರವು ಕೈಗೊಂಡ ಕ್ರಮಗಳೇನು? ಎಂದು ವಿಧಾನಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಕಂದಾಯ ಸಚಿವರಿಗೆ ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡರವರು ಭೂ ಕಬಳಿಕೆ ಮತ್ತು ಕೆರೆ ಒತ್ತುವರಿ ಮಾಡಿರುವವರ ವಿರುದ್ಧ ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ಕಲಂ 192 (ಎ) (1) ರಂತೆ ಕ್ರಮ ಕೈಗೊಂಡು ಒತ್ತುವರಿಯನ್ನು ತೆರವುಗೊಳಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಬೆಳ್ತಂಗಡಿ ತಾಲ್ಲೂಕಿಗೆ ಸಂಬಂದಿಸಿದಂತೆ ಒತ್ತುವರಿ ಕಟ್ಟಡ ಇರುವುದಿಲ್ಲ ಹಾಗೂ ಕೃಷಿಯೇತರ ಚಟುವಟಿಕೆಗಳ ಪಾಲಾಗುತ್ತಿರುವುದಿಲ್ಲ. ಸದರಿ ಕೆರೆಗಳ ತೆರವಿಗೆ ಲೋಕಾಯುಕ್ತವು ಸ್ವಂಪ್ರೇರಿತ ದೂರು ದಾಖಲಿಸಿದ್ದು, ಈ ಸಂಬಂಧ ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಪಟ್ಟಣ ಪಂಚಾಯತ್ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಗಿದೆ ಎಂದು ತಿಳಿಸಿದರು.

Related posts

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮೇ.31 ಕೊನೆಯ ದಿನ

Suddi Udaya

ನ.29: ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಹೆಚ್.ಬಿ ಲೀಲಾವತಿ ಸೇವಾ ನಿವೃತ್ತಿ

Suddi Udaya

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಪುಣ್ಯಕೋಟಿಯನ್ನು ಉಳಿಸಿ,ಕೋಟಿ ಕೋಟಿ ಪುಣ್ಯ ಗಳಿಸಿ, ಆ.26: ಉಜಿರೆಯಲ್ಲಿ “ಗೋವು ಉಳಿದರೆ ನಾವು” ಅಭಿಯಾನ-2026

Suddi Udaya

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ :ಮೈರೋಳ್ತಡ್ಕದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾಗಿ ಅಶೋಕ ಪಿ ಆಯ್ಕೆ

Suddi Udaya
error: Content is protected !!