25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದ್ವಿಚಕ್ರ ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆಗೆ ಗಂಭೀರ ಗಾಯ: ಮಂಗಳೂರು ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ : ದ್ವಿಚಕ್ರ ವಾಹನದಿಂದ ಮಹಿಳೆ ರಸ್ತೆಗೆ ಎಸೆಯಲ್ಪಟ್ಟು ಬಿದ್ದು ತಲೆಗೆ ತೀವ್ರ ಗಾಯಗೊಂಡ ಘಟನೆ ಫೆ.23 ರಂದು ವರದಿಯಾಗಿದೆ.ನಾವೂರು ಗ್ರಾಮದ ನಿವಾಸಿ ಸಂಜೀವ ಎಂಬವರ ಪತ್ನಿ ಕಮಲ (45ವ) ಗಾಯಗೊಂಡು ಮಂಗಳೂರು ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಫೆ 23ರಂದು ಬೆಳಿಗ್ಗೆ, ಕಮಲ ರವರು ಕೆಎ21ಎಸ್‌ 7593ನೇ ದ್ವಿಚಕ್ರ ವಾಹನದಲ್ಲಿ ಸಹಸವಾರೆಯಾಗಿ ಹಾಗೂ ಸಂತೋಷ್‌ ಎಂಬವರು ಸವಾರರಾಗಿ ಪ್ರಯಾಣಿಸುತ್ತಾ, ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ತಲುಪಿದಾಗ, ದ್ವಿಚಕ್ರ ವಾಹನವನ್ನು ಸಂತೋಷ್‌ ರವರು ದುಡುಕುತನದಿಂದ ಚಲಾಯಿಸಿದ ಪರಿಣಾಮ, ಸಹಸವಾರೆ ಕಮಲರವರು ದ್ವಿಚಕ್ರ ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟು ಬಿದ್ದು ತಲೆಗೆ ತೀವ್ರ ಸ್ವರೂಪದ ಗಾಯಗೊಂಡಿರುವುದಲ್ಲದೆ, ದ್ಚಿಚಕ್ರ ವಾಹನ ಸವಾರ ಸಂತೊಷ್‌ ರವರು ಚಾಲನಾ ನಿಯಂತ್ರಣ ತಪ್ಪಿ ವಾಹನ ಸಮೇತ ರಸ್ತೆಯ ಬದಿಯಲ್ಲಿರುವ ಚರಂಡಿಗೆ ಬಿದ್ದು ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ತೀವ್ರ ಸ್ವರೂಪದ ಗಾಯಗೊಂಡ ಸಹಸವಾರೆ ಕಮಲ ರವರನ್ನು ಚಿಕಿತ್ಸೆಯ ಬಗ್ಗೆ ಉಜಿರೆ ಎಸ್‌ಡಿಎಂ ಆಸ್ಪತ್ರೆಗೆ ಕರೆದುಕೊಂಡು ಬಂದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ಎಜೆ ಆಸ್ಪತ್ರೆ ಕರೆದುಕೊಂಡು ಹೋಗಿ ಚಿಕಿತ್ಸೆಗೆ ದಾಖಲಿಸಿರುವುದಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 23/2024 ಕಲಂ: 279,338 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಗುರುವಾಯನಕೆರೆ ಗೆಳೆಯರ ಬಳಗ 35 ನೇ ವರ್ಷದ ಶಾರದೋತ್ಸವ ಆರಂಭ

Suddi Udaya

ಕೊಕ್ಕಡ: ಸೌತಡ್ಕದಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ: ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ಆನೆ ತಿವಿದು; ಬಾಲಕೃಷ್ಣ ಶೆಟ್ಟಿ ಸ್ಥಳದಲ್ಲೇ ಸಾವು

Suddi Udaya

ಕತಾರ್ ಕಕ್ಕಿಂಜೆ ಶರೀಅತ್‌ ಕಾಲೇಜು ನೂತನ ಸಮಿತಿಗೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಸಹಭಾಗಿತ್ವದಲ್ಲಿ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16902 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

Suddi Udaya
error: Content is protected !!