July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದ್ವಿಚಕ್ರ ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆಗೆ ಗಂಭೀರ ಗಾಯ: ಮಂಗಳೂರು ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ : ದ್ವಿಚಕ್ರ ವಾಹನದಿಂದ ಮಹಿಳೆ ರಸ್ತೆಗೆ ಎಸೆಯಲ್ಪಟ್ಟು ಬಿದ್ದು ತಲೆಗೆ ತೀವ್ರ ಗಾಯಗೊಂಡ ಘಟನೆ ಫೆ.23 ರಂದು ವರದಿಯಾಗಿದೆ.ನಾವೂರು ಗ್ರಾಮದ ನಿವಾಸಿ ಸಂಜೀವ ಎಂಬವರ ಪತ್ನಿ ಕಮಲ (45ವ) ಗಾಯಗೊಂಡು ಮಂಗಳೂರು ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಫೆ 23ರಂದು ಬೆಳಿಗ್ಗೆ, ಕಮಲ ರವರು ಕೆಎ21ಎಸ್‌ 7593ನೇ ದ್ವಿಚಕ್ರ ವಾಹನದಲ್ಲಿ ಸಹಸವಾರೆಯಾಗಿ ಹಾಗೂ ಸಂತೋಷ್‌ ಎಂಬವರು ಸವಾರರಾಗಿ ಪ್ರಯಾಣಿಸುತ್ತಾ, ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ತಲುಪಿದಾಗ, ದ್ವಿಚಕ್ರ ವಾಹನವನ್ನು ಸಂತೋಷ್‌ ರವರು ದುಡುಕುತನದಿಂದ ಚಲಾಯಿಸಿದ ಪರಿಣಾಮ, ಸಹಸವಾರೆ ಕಮಲರವರು ದ್ವಿಚಕ್ರ ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟು ಬಿದ್ದು ತಲೆಗೆ ತೀವ್ರ ಸ್ವರೂಪದ ಗಾಯಗೊಂಡಿರುವುದಲ್ಲದೆ, ದ್ಚಿಚಕ್ರ ವಾಹನ ಸವಾರ ಸಂತೊಷ್‌ ರವರು ಚಾಲನಾ ನಿಯಂತ್ರಣ ತಪ್ಪಿ ವಾಹನ ಸಮೇತ ರಸ್ತೆಯ ಬದಿಯಲ್ಲಿರುವ ಚರಂಡಿಗೆ ಬಿದ್ದು ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ತೀವ್ರ ಸ್ವರೂಪದ ಗಾಯಗೊಂಡ ಸಹಸವಾರೆ ಕಮಲ ರವರನ್ನು ಚಿಕಿತ್ಸೆಯ ಬಗ್ಗೆ ಉಜಿರೆ ಎಸ್‌ಡಿಎಂ ಆಸ್ಪತ್ರೆಗೆ ಕರೆದುಕೊಂಡು ಬಂದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ಎಜೆ ಆಸ್ಪತ್ರೆ ಕರೆದುಕೊಂಡು ಹೋಗಿ ಚಿಕಿತ್ಸೆಗೆ ದಾಖಲಿಸಿರುವುದಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 23/2024 ಕಲಂ: 279,338 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬಂದಾರು ಗ್ರಾಮಸ್ಥರಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಸಮೀಕ್ಷೆ ಮುಗಿಯದ ಹಿನ್ನೆಲೆ ಅ. 18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಿಗೆ ರಜೆ : ಸಿ.ಎಂ. ಸಿದ್ದರಾಮಯ್ಯ ಆದೇಶ

Suddi Udaya

ಬೆಳ್ತಂಗಡಿ : ವಕೀಲರು ವಿನೋದರ್ ಕುಂಬಾರ ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಪೋಸ್ಟರ್ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ “ದೀಕ್ಷಾವಿಧಿ” ತರಗತಿ ಪ್ರಾರಂಭೋತ್ಸವ

Suddi Udaya

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

Suddi Udaya

ಫೆ. 26ರಿಂದ ಮಾ.4: ಬೆಳಾಲು ಮಾಯ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರೆ

Suddi Udaya
error: Content is protected !!