July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿ ಫೇ.23ರಂದು ಮಧ್ಯಾಹ್ನ ತಂಡಗಳ ಮಧ್ಯೆ ಹಲ್ಲೆ-ಪ್ರತಿ ಹಲ್ಲೆ ನಡೆದ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು-ಪ್ರತಿ ದೂರು ದಾಖಲಾದ ಬಗ್ಗೆ ವರದಿಯಾಗಿದೆ.

ಈ ಬಗ್ಗೆ ಠಾಣೆಗೆ ದೂರು ನೀಡಿದ ಕಳಿಯ ಗ್ರಾಮದ ನಿವಾಸಿ ಮಹಮ್ಮದ್ ರಮೀಜ್ (32) ಅವರು, ಶುಕ್ರವಾರ (ಫೆ 23) ಮಧ್ಯಾಹ್ನ ನ್ಯಾಯಾತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿಯಿದ್ದಾಗ ಪರಿಚಯದ ಆರೋಪಿ ಶಾಕೀರ್ ಎಂಬಾತ ಬಂದು ಹಲ್ಲೆ ನಡೆಸಿದ್ದು, ಆತನೊಂದಿಗೆ ಇದ್ದ ಇತರ ಆರೋಪಿಗಳಾದ ಜಾಬೀ‌ರ್, ಸಜ್ವಾನ್, ಸಿದ್ದಿಕ್, ನಾಸೀರ್, ರವೂಫ್ ಎಂಬವರುಗಳು ಕೂಡಾ ಹಲ್ಲೆ ನಡೆಸಿ ಅಲ್ಲಿಂದ ತೆರಳಿರುತ್ತಾರೆ. ನಂತರ ಭಾವನೊಂದಿಗೆ ಮನೆಗೆ ತೆರಳಿದಾಗ, ಅಲ್ಲಿಗೆ ಬಂದ ಆರೋಪಿಗಳು ಮನೆಗೆ ಬಂದು, ನನಗೆ ಹಾಗೂ ನನ್ನ ಪತ್ನಿಗೆ ಹಲ್ಲೆ ನಡೆಸಿರುತ್ತಾರೆ ಅಲ್ಲದೆ ಪತ್ನಿಯೊಂದಿಗೆ ಅನುಚಿತವಾಗಿ ವರ್ತಿಸಿ ಮನೆಯಲ್ಲಿದ್ದ ಕುರ್ಚಿಗಳಿಗೆ ಹಾನಿ ಮಾಡಿ ತೆರಳಿರುತ್ತಾರೆ. ಹಲ್ಲೆಯ ವೇಳೆ ಕಿಸೆಯಲ್ಲಿದ್ದ 12,600/- ರೂ. ಕಳವಾಗಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 23/2024 143, 147, 148, 323, 324, 504, 448, 354, 379 / 149 ಐಪಿಸಿಯಂತೆ ಪ್ರಕರಣ ದಾಖಲಿಸಲಾಗಿದೆ.

Related posts

ವಾಣಿ ಕಾಲೇಜಿನಲ್ಲಿ ಆಟಿ ಒಂಜಿ ನೆಂಪು -ಉಪನ್ಯಾಸ ಕಾರ್ಯಕ್ರಮ

Suddi Udaya

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

Suddi Udaya

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಕಡಿರುದ್ಯಾವರ: ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆಯ ನೀರು

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!