30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿ ಫೇ.23ರಂದು ಮಧ್ಯಾಹ್ನ ತಂಡಗಳ ಮಧ್ಯೆ ಹಲ್ಲೆ-ಪ್ರತಿ ಹಲ್ಲೆ ನಡೆದ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು-ಪ್ರತಿ ದೂರು ದಾಖಲಾದ ಬಗ್ಗೆ ವರದಿಯಾಗಿದೆ.

ಈ ಬಗ್ಗೆ ಠಾಣೆಗೆ ದೂರು ನೀಡಿದ ಕಳಿಯ ಗ್ರಾಮದ ನಿವಾಸಿ ಮಹಮ್ಮದ್ ರಮೀಜ್ (32) ಅವರು, ಶುಕ್ರವಾರ (ಫೆ 23) ಮಧ್ಯಾಹ್ನ ನ್ಯಾಯಾತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿಯಿದ್ದಾಗ ಪರಿಚಯದ ಆರೋಪಿ ಶಾಕೀರ್ ಎಂಬಾತ ಬಂದು ಹಲ್ಲೆ ನಡೆಸಿದ್ದು, ಆತನೊಂದಿಗೆ ಇದ್ದ ಇತರ ಆರೋಪಿಗಳಾದ ಜಾಬೀ‌ರ್, ಸಜ್ವಾನ್, ಸಿದ್ದಿಕ್, ನಾಸೀರ್, ರವೂಫ್ ಎಂಬವರುಗಳು ಕೂಡಾ ಹಲ್ಲೆ ನಡೆಸಿ ಅಲ್ಲಿಂದ ತೆರಳಿರುತ್ತಾರೆ. ನಂತರ ಭಾವನೊಂದಿಗೆ ಮನೆಗೆ ತೆರಳಿದಾಗ, ಅಲ್ಲಿಗೆ ಬಂದ ಆರೋಪಿಗಳು ಮನೆಗೆ ಬಂದು, ನನಗೆ ಹಾಗೂ ನನ್ನ ಪತ್ನಿಗೆ ಹಲ್ಲೆ ನಡೆಸಿರುತ್ತಾರೆ ಅಲ್ಲದೆ ಪತ್ನಿಯೊಂದಿಗೆ ಅನುಚಿತವಾಗಿ ವರ್ತಿಸಿ ಮನೆಯಲ್ಲಿದ್ದ ಕುರ್ಚಿಗಳಿಗೆ ಹಾನಿ ಮಾಡಿ ತೆರಳಿರುತ್ತಾರೆ. ಹಲ್ಲೆಯ ವೇಳೆ ಕಿಸೆಯಲ್ಲಿದ್ದ 12,600/- ರೂ. ಕಳವಾಗಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 23/2024 143, 147, 148, 323, 324, 504, 448, 354, 379 / 149 ಐಪಿಸಿಯಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಶಿರ್ಲಾಲು ಸಿಎ ಬ್ಯಾಂಕಿನಿಂದ ಎಸ್.ಎಸ್.ಎಲ್.ಸಿ ಸಾಧಕ‌ ವಿದ್ಯಾರ್ಥಿನಿ ತ್ರಿಷಾರವರಿಗೆ ಸನ್ಮಾನ

Suddi Udaya

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

Suddi Udaya

ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ: ಡಾ.ಹೆಗ್ಗಡೆ

Suddi Udaya

ಉಜಿರೆ: ವಾಸದ ಮನೆ ಕೆಡವಿ ಮನೆ ಸೊತ್ತು ಬೀದಿಗೆಸೆದ ವಿಲಕ್ಷಣ ಘಟನೆ: ವೀಡಿಯೋ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಗೆ ಜೀವ ಬೆದರಿಕೆ

Suddi Udaya

ಮಡಂತ್ಯಾರು ಮಿತ್ರಾ ವ್ಹೀಲ್ ಮಾಸ್ಟರ್ ಶುಭಾರಂಭ

Suddi Udaya
error: Content is protected !!