July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದ್ವಿಚಕ್ರ ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆಗೆ ಗಂಭೀರ ಗಾಯ: ಮಂಗಳೂರು ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ : ದ್ವಿಚಕ್ರ ವಾಹನದಿಂದ ಮಹಿಳೆ ರಸ್ತೆಗೆ ಎಸೆಯಲ್ಪಟ್ಟು ಬಿದ್ದು ತಲೆಗೆ ತೀವ್ರ ಗಾಯಗೊಂಡ ಘಟನೆ ಫೆ.23 ರಂದು ವರದಿಯಾಗಿದೆ.ನಾವೂರು ಗ್ರಾಮದ ನಿವಾಸಿ ಸಂಜೀವ ಎಂಬವರ ಪತ್ನಿ ಕಮಲ (45ವ) ಗಾಯಗೊಂಡು ಮಂಗಳೂರು ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಫೆ 23ರಂದು ಬೆಳಿಗ್ಗೆ, ಕಮಲ ರವರು ಕೆಎ21ಎಸ್‌ 7593ನೇ ದ್ವಿಚಕ್ರ ವಾಹನದಲ್ಲಿ ಸಹಸವಾರೆಯಾಗಿ ಹಾಗೂ ಸಂತೋಷ್‌ ಎಂಬವರು ಸವಾರರಾಗಿ ಪ್ರಯಾಣಿಸುತ್ತಾ, ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ತಲುಪಿದಾಗ, ದ್ವಿಚಕ್ರ ವಾಹನವನ್ನು ಸಂತೋಷ್‌ ರವರು ದುಡುಕುತನದಿಂದ ಚಲಾಯಿಸಿದ ಪರಿಣಾಮ, ಸಹಸವಾರೆ ಕಮಲರವರು ದ್ವಿಚಕ್ರ ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟು ಬಿದ್ದು ತಲೆಗೆ ತೀವ್ರ ಸ್ವರೂಪದ ಗಾಯಗೊಂಡಿರುವುದಲ್ಲದೆ, ದ್ಚಿಚಕ್ರ ವಾಹನ ಸವಾರ ಸಂತೊಷ್‌ ರವರು ಚಾಲನಾ ನಿಯಂತ್ರಣ ತಪ್ಪಿ ವಾಹನ ಸಮೇತ ರಸ್ತೆಯ ಬದಿಯಲ್ಲಿರುವ ಚರಂಡಿಗೆ ಬಿದ್ದು ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ತೀವ್ರ ಸ್ವರೂಪದ ಗಾಯಗೊಂಡ ಸಹಸವಾರೆ ಕಮಲ ರವರನ್ನು ಚಿಕಿತ್ಸೆಯ ಬಗ್ಗೆ ಉಜಿರೆ ಎಸ್‌ಡಿಎಂ ಆಸ್ಪತ್ರೆಗೆ ಕರೆದುಕೊಂಡು ಬಂದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ಎಜೆ ಆಸ್ಪತ್ರೆ ಕರೆದುಕೊಂಡು ಹೋಗಿ ಚಿಕಿತ್ಸೆಗೆ ದಾಖಲಿಸಿರುವುದಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 23/2024 ಕಲಂ: 279,338 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವತಿಯಿಂದ ಸಾಹಿತಿ ಡಾ. ಎಸ್ ಎಲ್ ಭೈರಪ್ಪರವರಿಗೆ ನುಡಿನಮನ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya

ಜೂ.28: ಬೆಳ್ತಂಗಡಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ-ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಮೂರು ಕಡೆ ಸಮಾರಂಭ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.97.32% ಫಲಿತಾಂಶ

Suddi Udaya

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya
error: Content is protected !!