April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿ ಫೇ.23ರಂದು ಮಧ್ಯಾಹ್ನ ತಂಡಗಳ ಮಧ್ಯೆ ಹಲ್ಲೆ-ಪ್ರತಿ ಹಲ್ಲೆ ನಡೆದ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು-ಪ್ರತಿ ದೂರು ದಾಖಲಾದ ಬಗ್ಗೆ ವರದಿಯಾಗಿದೆ.

ಈ ಬಗ್ಗೆ ಠಾಣೆಗೆ ದೂರು ನೀಡಿದ ಕಳಿಯ ಗ್ರಾಮದ ನಿವಾಸಿ ಮಹಮ್ಮದ್ ರಮೀಜ್ (32) ಅವರು, ಶುಕ್ರವಾರ (ಫೆ 23) ಮಧ್ಯಾಹ್ನ ನ್ಯಾಯಾತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿಯಿದ್ದಾಗ ಪರಿಚಯದ ಆರೋಪಿ ಶಾಕೀರ್ ಎಂಬಾತ ಬಂದು ಹಲ್ಲೆ ನಡೆಸಿದ್ದು, ಆತನೊಂದಿಗೆ ಇದ್ದ ಇತರ ಆರೋಪಿಗಳಾದ ಜಾಬೀ‌ರ್, ಸಜ್ವಾನ್, ಸಿದ್ದಿಕ್, ನಾಸೀರ್, ರವೂಫ್ ಎಂಬವರುಗಳು ಕೂಡಾ ಹಲ್ಲೆ ನಡೆಸಿ ಅಲ್ಲಿಂದ ತೆರಳಿರುತ್ತಾರೆ. ನಂತರ ಭಾವನೊಂದಿಗೆ ಮನೆಗೆ ತೆರಳಿದಾಗ, ಅಲ್ಲಿಗೆ ಬಂದ ಆರೋಪಿಗಳು ಮನೆಗೆ ಬಂದು, ನನಗೆ ಹಾಗೂ ನನ್ನ ಪತ್ನಿಗೆ ಹಲ್ಲೆ ನಡೆಸಿರುತ್ತಾರೆ ಅಲ್ಲದೆ ಪತ್ನಿಯೊಂದಿಗೆ ಅನುಚಿತವಾಗಿ ವರ್ತಿಸಿ ಮನೆಯಲ್ಲಿದ್ದ ಕುರ್ಚಿಗಳಿಗೆ ಹಾನಿ ಮಾಡಿ ತೆರಳಿರುತ್ತಾರೆ. ಹಲ್ಲೆಯ ವೇಳೆ ಕಿಸೆಯಲ್ಲಿದ್ದ 12,600/- ರೂ. ಕಳವಾಗಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 23/2024 143, 147, 148, 323, 324, 504, 448, 354, 379 / 149 ಐಪಿಸಿಯಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಕರ್ನಾಟಕ ರಾಜ್ಯದ ವೃತ್ತಿಪರ ಸಿವಿಲ್ ಇಂಜಿನಿಯರುಗಳ ಪರಿಷತ್ತಿನ ಚೊಚ್ಚಲ ಸಮಿತಿಗೆ ಜಗದೀಶ ಪ್ರಸಾದ್ ಆಯ್ಕೆ

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ನಾರಾವಿಯಲ್ಲಿ ನಿರ್ಮಿಸಲಾದ ಚೆಕ್ ಪೋಸ್ಟ್ ಗೆ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ, ಪರಿಶೀಲನೆ

Suddi Udaya

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ಮರು ನಿರ್ಮಾಣ ಕಾರ್ಯ ನಡೆಯುತ್ತಿದ್ದು ಸ್ಥಳಕ್ಕೆ ಪುತ್ತೂರು ಮಾಸ್ಟರ್ ಪ್ಲಾನರಿಯವರಿಂದ ಭೇಟಿ

Suddi Udaya
error: Content is protected !!