July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿ ಫೇ.23ರಂದು ಮಧ್ಯಾಹ್ನ ತಂಡಗಳ ಮಧ್ಯೆ ಹಲ್ಲೆ-ಪ್ರತಿ ಹಲ್ಲೆ ನಡೆದ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು-ಪ್ರತಿ ದೂರು ದಾಖಲಾದ ಬಗ್ಗೆ ವರದಿಯಾಗಿದೆ.

ಈ ಬಗ್ಗೆ ಠಾಣೆಗೆ ದೂರು ನೀಡಿದ ಕಳಿಯ ಗ್ರಾಮದ ನಿವಾಸಿ ಮಹಮ್ಮದ್ ರಮೀಜ್ (32) ಅವರು, ಶುಕ್ರವಾರ (ಫೆ 23) ಮಧ್ಯಾಹ್ನ ನ್ಯಾಯಾತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿಯಿದ್ದಾಗ ಪರಿಚಯದ ಆರೋಪಿ ಶಾಕೀರ್ ಎಂಬಾತ ಬಂದು ಹಲ್ಲೆ ನಡೆಸಿದ್ದು, ಆತನೊಂದಿಗೆ ಇದ್ದ ಇತರ ಆರೋಪಿಗಳಾದ ಜಾಬೀ‌ರ್, ಸಜ್ವಾನ್, ಸಿದ್ದಿಕ್, ನಾಸೀರ್, ರವೂಫ್ ಎಂಬವರುಗಳು ಕೂಡಾ ಹಲ್ಲೆ ನಡೆಸಿ ಅಲ್ಲಿಂದ ತೆರಳಿರುತ್ತಾರೆ. ನಂತರ ಭಾವನೊಂದಿಗೆ ಮನೆಗೆ ತೆರಳಿದಾಗ, ಅಲ್ಲಿಗೆ ಬಂದ ಆರೋಪಿಗಳು ಮನೆಗೆ ಬಂದು, ನನಗೆ ಹಾಗೂ ನನ್ನ ಪತ್ನಿಗೆ ಹಲ್ಲೆ ನಡೆಸಿರುತ್ತಾರೆ ಅಲ್ಲದೆ ಪತ್ನಿಯೊಂದಿಗೆ ಅನುಚಿತವಾಗಿ ವರ್ತಿಸಿ ಮನೆಯಲ್ಲಿದ್ದ ಕುರ್ಚಿಗಳಿಗೆ ಹಾನಿ ಮಾಡಿ ತೆರಳಿರುತ್ತಾರೆ. ಹಲ್ಲೆಯ ವೇಳೆ ಕಿಸೆಯಲ್ಲಿದ್ದ 12,600/- ರೂ. ಕಳವಾಗಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 23/2024 143, 147, 148, 323, 324, 504, 448, 354, 379 / 149 ಐಪಿಸಿಯಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿದ ಸ್ಟೀಲ್ ಪಾತ್ರೆ ಒಳಗೆ ವ್ಯಕ್ತಿಯ ಶವ ಪತ್ತೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ

Suddi Udaya

ಕುವೆಟ್ಟು: ಪಯ್ಯೋಟ್ಟು ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!