23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿ ಫೇ.23ರಂದು ಮಧ್ಯಾಹ್ನ ತಂಡಗಳ ಮಧ್ಯೆ ಹಲ್ಲೆ-ಪ್ರತಿ ಹಲ್ಲೆ ನಡೆದ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು-ಪ್ರತಿ ದೂರು ದಾಖಲಾದ ಬಗ್ಗೆ ವರದಿಯಾಗಿದೆ.

ಈ ಬಗ್ಗೆ ಠಾಣೆಗೆ ದೂರು ನೀಡಿದ ಕಳಿಯ ಗ್ರಾಮದ ನಿವಾಸಿ ಮಹಮ್ಮದ್ ರಮೀಜ್ (32) ಅವರು, ಶುಕ್ರವಾರ (ಫೆ 23) ಮಧ್ಯಾಹ್ನ ನ್ಯಾಯಾತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿಯಿದ್ದಾಗ ಪರಿಚಯದ ಆರೋಪಿ ಶಾಕೀರ್ ಎಂಬಾತ ಬಂದು ಹಲ್ಲೆ ನಡೆಸಿದ್ದು, ಆತನೊಂದಿಗೆ ಇದ್ದ ಇತರ ಆರೋಪಿಗಳಾದ ಜಾಬೀ‌ರ್, ಸಜ್ವಾನ್, ಸಿದ್ದಿಕ್, ನಾಸೀರ್, ರವೂಫ್ ಎಂಬವರುಗಳು ಕೂಡಾ ಹಲ್ಲೆ ನಡೆಸಿ ಅಲ್ಲಿಂದ ತೆರಳಿರುತ್ತಾರೆ. ನಂತರ ಭಾವನೊಂದಿಗೆ ಮನೆಗೆ ತೆರಳಿದಾಗ, ಅಲ್ಲಿಗೆ ಬಂದ ಆರೋಪಿಗಳು ಮನೆಗೆ ಬಂದು, ನನಗೆ ಹಾಗೂ ನನ್ನ ಪತ್ನಿಗೆ ಹಲ್ಲೆ ನಡೆಸಿರುತ್ತಾರೆ ಅಲ್ಲದೆ ಪತ್ನಿಯೊಂದಿಗೆ ಅನುಚಿತವಾಗಿ ವರ್ತಿಸಿ ಮನೆಯಲ್ಲಿದ್ದ ಕುರ್ಚಿಗಳಿಗೆ ಹಾನಿ ಮಾಡಿ ತೆರಳಿರುತ್ತಾರೆ. ಹಲ್ಲೆಯ ವೇಳೆ ಕಿಸೆಯಲ್ಲಿದ್ದ 12,600/- ರೂ. ಕಳವಾಗಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 23/2024 143, 147, 148, 323, 324, 504, 448, 354, 379 / 149 ಐಪಿಸಿಯಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya

ಪಂಜಿಕಲ್ಲು ಕಜೆಬೈಲು ಶ್ರೀ ಪಿಲಿಚಾಮುಂಡಿ ದೈವದ ನೇಮದ ಪ್ರಯುಕ್ತ: ಮಧ್ಯಯಕ್ಷಕೂಟದ ವತಿಯಿಂದ ತಾಳಮದ್ದಳೆ

Suddi Udaya

ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ

Suddi Udaya

ಜೂ.13: ಕೊಕ್ಕಡದಲ್ಲಿ ಸತ್ಯಸುದ್ದಿ ನ್ಯೂಸ್ ಡಿಜಿಟಲ್ ಮೀಡಿಯಾ ಶುಭಾರಂಭ

Suddi Udaya

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!