ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯಕ್ರಮ

Suddi Udaya

ಉಜಿರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡತ್ತೋಡಿ ಪೆರ್ಲ ಇಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯ ಕ್ರಮವನ್ನು ಫೆ.23 ರಂದು ನಡೆಸಲಾಯಿತು.

ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಸಿ ಕೆ ಚಂದ್ರಕಲಾ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಂಚಾಯಿತಿ ಸದಸ್ಯರಾದ ಶ್ರೀಮತಿ ಲಲಿತಾ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ರೇವತಿ, ಉಪಾಧ್ಯಕ್ಷರಾದ ದೇವರಾಜ್, ಸದಸ್ಯರಾದ ಶ್ರೀಮತಿ ಅನುಪಮ ಹಾಗೂ ಇತರ ಪೋಷಕರು ಊರ ವಿದ್ಯಾಭಿಮಾನಿಗಳು ಶಾಲೆಯ ಅಧ್ಯಾಪಕ ವೃಂದ, ಮಕ್ಕಳು ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೆ ಮುಖ್ಯಶಿಕ್ಷಕರಾದ ಸೇವಂತಿ ಬಿ ಸ್ವಾಗತಿಸಿದರು ಮತ್ತು ಶಿಕ್ಷಕರಾದ ಉಷಾಲತಾ ಧನ್ಯವಾದವಿತ್ತರು.

Leave a Comment

error: Content is protected !!