25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿ ಫೇ.23ರಂದು ಮಧ್ಯಾಹ್ನ ತಂಡಗಳ ಮಧ್ಯೆ ಹಲ್ಲೆ-ಪ್ರತಿ ಹಲ್ಲೆ ನಡೆದ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು-ಪ್ರತಿ ದೂರು ದಾಖಲಾದ ಬಗ್ಗೆ ವರದಿಯಾಗಿದೆ.

ಈ ಬಗ್ಗೆ ಠಾಣೆಗೆ ದೂರು ನೀಡಿದ ಕಳಿಯ ಗ್ರಾಮದ ನಿವಾಸಿ ಮಹಮ್ಮದ್ ರಮೀಜ್ (32) ಅವರು, ಶುಕ್ರವಾರ (ಫೆ 23) ಮಧ್ಯಾಹ್ನ ನ್ಯಾಯಾತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿಯಿದ್ದಾಗ ಪರಿಚಯದ ಆರೋಪಿ ಶಾಕೀರ್ ಎಂಬಾತ ಬಂದು ಹಲ್ಲೆ ನಡೆಸಿದ್ದು, ಆತನೊಂದಿಗೆ ಇದ್ದ ಇತರ ಆರೋಪಿಗಳಾದ ಜಾಬೀ‌ರ್, ಸಜ್ವಾನ್, ಸಿದ್ದಿಕ್, ನಾಸೀರ್, ರವೂಫ್ ಎಂಬವರುಗಳು ಕೂಡಾ ಹಲ್ಲೆ ನಡೆಸಿ ಅಲ್ಲಿಂದ ತೆರಳಿರುತ್ತಾರೆ. ನಂತರ ಭಾವನೊಂದಿಗೆ ಮನೆಗೆ ತೆರಳಿದಾಗ, ಅಲ್ಲಿಗೆ ಬಂದ ಆರೋಪಿಗಳು ಮನೆಗೆ ಬಂದು, ನನಗೆ ಹಾಗೂ ನನ್ನ ಪತ್ನಿಗೆ ಹಲ್ಲೆ ನಡೆಸಿರುತ್ತಾರೆ ಅಲ್ಲದೆ ಪತ್ನಿಯೊಂದಿಗೆ ಅನುಚಿತವಾಗಿ ವರ್ತಿಸಿ ಮನೆಯಲ್ಲಿದ್ದ ಕುರ್ಚಿಗಳಿಗೆ ಹಾನಿ ಮಾಡಿ ತೆರಳಿರುತ್ತಾರೆ. ಹಲ್ಲೆಯ ವೇಳೆ ಕಿಸೆಯಲ್ಲಿದ್ದ 12,600/- ರೂ. ಕಳವಾಗಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 23/2024 143, 147, 148, 323, 324, 504, 448, 354, 379 / 149 ಐಪಿಸಿಯಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಬೆಳಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಗ್ರಾಮ ಸಮಿತಿಯ ವಾರ್ಷಿಕ ಕ್ರೀಡಾಕೂಟ

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ

Suddi Udaya

ಬದ್ಯಾರು ಮನೆಯಂಗಳದಲ್ಲಿ ನಾಗರಹಾವುಗಳ ಕಾದಾಟ: ಲಾಯಿಲದ ಸ್ನೇಕ್ ಅಶೋಕ್ ರಿಂದ ರಕ್ಷಣೆ

Suddi Udaya

ಕಲ್ಲೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya
error: Content is protected !!