23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿ ಫೇ.23ರಂದು ಮಧ್ಯಾಹ್ನ ತಂಡಗಳ ಮಧ್ಯೆ ಹಲ್ಲೆ-ಪ್ರತಿ ಹಲ್ಲೆ ನಡೆದ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು-ಪ್ರತಿ ದೂರು ದಾಖಲಾದ ಬಗ್ಗೆ ವರದಿಯಾಗಿದೆ.

ಈ ಬಗ್ಗೆ ಠಾಣೆಗೆ ದೂರು ನೀಡಿದ ಕಳಿಯ ಗ್ರಾಮದ ನಿವಾಸಿ ಮಹಮ್ಮದ್ ರಮೀಜ್ (32) ಅವರು, ಶುಕ್ರವಾರ (ಫೆ 23) ಮಧ್ಯಾಹ್ನ ನ್ಯಾಯಾತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿಯಿದ್ದಾಗ ಪರಿಚಯದ ಆರೋಪಿ ಶಾಕೀರ್ ಎಂಬಾತ ಬಂದು ಹಲ್ಲೆ ನಡೆಸಿದ್ದು, ಆತನೊಂದಿಗೆ ಇದ್ದ ಇತರ ಆರೋಪಿಗಳಾದ ಜಾಬೀ‌ರ್, ಸಜ್ವಾನ್, ಸಿದ್ದಿಕ್, ನಾಸೀರ್, ರವೂಫ್ ಎಂಬವರುಗಳು ಕೂಡಾ ಹಲ್ಲೆ ನಡೆಸಿ ಅಲ್ಲಿಂದ ತೆರಳಿರುತ್ತಾರೆ. ನಂತರ ಭಾವನೊಂದಿಗೆ ಮನೆಗೆ ತೆರಳಿದಾಗ, ಅಲ್ಲಿಗೆ ಬಂದ ಆರೋಪಿಗಳು ಮನೆಗೆ ಬಂದು, ನನಗೆ ಹಾಗೂ ನನ್ನ ಪತ್ನಿಗೆ ಹಲ್ಲೆ ನಡೆಸಿರುತ್ತಾರೆ ಅಲ್ಲದೆ ಪತ್ನಿಯೊಂದಿಗೆ ಅನುಚಿತವಾಗಿ ವರ್ತಿಸಿ ಮನೆಯಲ್ಲಿದ್ದ ಕುರ್ಚಿಗಳಿಗೆ ಹಾನಿ ಮಾಡಿ ತೆರಳಿರುತ್ತಾರೆ. ಹಲ್ಲೆಯ ವೇಳೆ ಕಿಸೆಯಲ್ಲಿದ್ದ 12,600/- ರೂ. ಕಳವಾಗಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 23/2024 143, 147, 148, 323, 324, 504, 448, 354, 379 / 149 ಐಪಿಸಿಯಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ

Suddi Udaya

ಉರುವಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ವಾರ್ಷಿಕ ಮಹಾಸಭೆ

Suddi Udaya

ಮಚ್ಚಿನ ಗ್ರಾಮದ ಪೇಟೆಯ ಶೌಚಾಲಯದ ಆದೋಗತಿ.. ಉಪಯೋಗಕ್ಕಿಲ್ಲದ ಕಟ್ಟಡ-ತುಕ್ಕು ಹಿಡಿದ ಬಾಗಿಲು…

Suddi Udaya

ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

Suddi Udaya

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya

ಕಣಿಯೂರು ದ.ಕ. ಜಿ.ಪ. ಸ.ಉ. ಹಿ. ಪ್ರಾ. ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಸಹಾಯಧನ

Suddi Udaya
error: Content is protected !!