July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿ ಫೇ.23ರಂದು ಮಧ್ಯಾಹ್ನ ತಂಡಗಳ ಮಧ್ಯೆ ಹಲ್ಲೆ-ಪ್ರತಿ ಹಲ್ಲೆ ನಡೆದ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು-ಪ್ರತಿ ದೂರು ದಾಖಲಾದ ಬಗ್ಗೆ ವರದಿಯಾಗಿದೆ.

ಈ ಬಗ್ಗೆ ಠಾಣೆಗೆ ದೂರು ನೀಡಿದ ಕಳಿಯ ಗ್ರಾಮದ ನಿವಾಸಿ ಮಹಮ್ಮದ್ ರಮೀಜ್ (32) ಅವರು, ಶುಕ್ರವಾರ (ಫೆ 23) ಮಧ್ಯಾಹ್ನ ನ್ಯಾಯಾತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿಯಿದ್ದಾಗ ಪರಿಚಯದ ಆರೋಪಿ ಶಾಕೀರ್ ಎಂಬಾತ ಬಂದು ಹಲ್ಲೆ ನಡೆಸಿದ್ದು, ಆತನೊಂದಿಗೆ ಇದ್ದ ಇತರ ಆರೋಪಿಗಳಾದ ಜಾಬೀ‌ರ್, ಸಜ್ವಾನ್, ಸಿದ್ದಿಕ್, ನಾಸೀರ್, ರವೂಫ್ ಎಂಬವರುಗಳು ಕೂಡಾ ಹಲ್ಲೆ ನಡೆಸಿ ಅಲ್ಲಿಂದ ತೆರಳಿರುತ್ತಾರೆ. ನಂತರ ಭಾವನೊಂದಿಗೆ ಮನೆಗೆ ತೆರಳಿದಾಗ, ಅಲ್ಲಿಗೆ ಬಂದ ಆರೋಪಿಗಳು ಮನೆಗೆ ಬಂದು, ನನಗೆ ಹಾಗೂ ನನ್ನ ಪತ್ನಿಗೆ ಹಲ್ಲೆ ನಡೆಸಿರುತ್ತಾರೆ ಅಲ್ಲದೆ ಪತ್ನಿಯೊಂದಿಗೆ ಅನುಚಿತವಾಗಿ ವರ್ತಿಸಿ ಮನೆಯಲ್ಲಿದ್ದ ಕುರ್ಚಿಗಳಿಗೆ ಹಾನಿ ಮಾಡಿ ತೆರಳಿರುತ್ತಾರೆ. ಹಲ್ಲೆಯ ವೇಳೆ ಕಿಸೆಯಲ್ಲಿದ್ದ 12,600/- ರೂ. ಕಳವಾಗಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 23/2024 143, 147, 148, 323, 324, 504, 448, 354, 379 / 149 ಐಪಿಸಿಯಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಉಮಾಮಹೇಶ್ವರ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಕಿರಿಯಾಡಿ ವೃತ್ತ ಲೋಕಾರ್ಪಣೆ

Suddi Udaya

ದ.ಕ ಜಿಲ್ಲಾ ಕಸಾಪ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳ ಭೇಟಿ, ಯೋಗಕ್ಷೇಮ ವಿಚಾರಣೆ

Suddi Udaya

ಎಕ್ಸೆಲ್ ನಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಲಾಯಿಲ: ರಬ್ಬರ್ ತೋಟಕ್ಕೆ ಬೆಂಕಿ: 75 ರಷ್ಟು ಮರಕ್ಕೆ ಹಾನಿ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನಕ್ಕೆ ಹೈ ಮಾಸ್ಕ್ ದೀಪದ ಕೊಡುಗೆ ನೀಡಿದ ವಿಧಾನ ಪರಿಷತ್ತು ಶಾಸಕ ಪ್ರತಾಪ್ ಸಿಂಹ ನಾಯಕ್

Suddi Udaya

ರಾ. ಹೆ. ಕಾಮಗಾರಿ ಮಡಂತ್ಯಾರು ಪೇಟೆಯಲ್ಲಿ ಅಲ್ಲಲ್ಲಿ ತೆರೆದ ಚರಂಡಿ: ಸಾವಜನಿಕರ ಓಡಾಟಕ್ಕೆ ಅಡಚಣೆ

Suddi Udaya
error: Content is protected !!