23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿ ಫೇ.23ರಂದು ಮಧ್ಯಾಹ್ನ ತಂಡಗಳ ಮಧ್ಯೆ ಹಲ್ಲೆ-ಪ್ರತಿ ಹಲ್ಲೆ ನಡೆದ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು-ಪ್ರತಿ ದೂರು ದಾಖಲಾದ ಬಗ್ಗೆ ವರದಿಯಾಗಿದೆ.

ಈ ಬಗ್ಗೆ ಠಾಣೆಗೆ ದೂರು ನೀಡಿದ ಕಳಿಯ ಗ್ರಾಮದ ನಿವಾಸಿ ಮಹಮ್ಮದ್ ರಮೀಜ್ (32) ಅವರು, ಶುಕ್ರವಾರ (ಫೆ 23) ಮಧ್ಯಾಹ್ನ ನ್ಯಾಯಾತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿಯಿದ್ದಾಗ ಪರಿಚಯದ ಆರೋಪಿ ಶಾಕೀರ್ ಎಂಬಾತ ಬಂದು ಹಲ್ಲೆ ನಡೆಸಿದ್ದು, ಆತನೊಂದಿಗೆ ಇದ್ದ ಇತರ ಆರೋಪಿಗಳಾದ ಜಾಬೀ‌ರ್, ಸಜ್ವಾನ್, ಸಿದ್ದಿಕ್, ನಾಸೀರ್, ರವೂಫ್ ಎಂಬವರುಗಳು ಕೂಡಾ ಹಲ್ಲೆ ನಡೆಸಿ ಅಲ್ಲಿಂದ ತೆರಳಿರುತ್ತಾರೆ. ನಂತರ ಭಾವನೊಂದಿಗೆ ಮನೆಗೆ ತೆರಳಿದಾಗ, ಅಲ್ಲಿಗೆ ಬಂದ ಆರೋಪಿಗಳು ಮನೆಗೆ ಬಂದು, ನನಗೆ ಹಾಗೂ ನನ್ನ ಪತ್ನಿಗೆ ಹಲ್ಲೆ ನಡೆಸಿರುತ್ತಾರೆ ಅಲ್ಲದೆ ಪತ್ನಿಯೊಂದಿಗೆ ಅನುಚಿತವಾಗಿ ವರ್ತಿಸಿ ಮನೆಯಲ್ಲಿದ್ದ ಕುರ್ಚಿಗಳಿಗೆ ಹಾನಿ ಮಾಡಿ ತೆರಳಿರುತ್ತಾರೆ. ಹಲ್ಲೆಯ ವೇಳೆ ಕಿಸೆಯಲ್ಲಿದ್ದ 12,600/- ರೂ. ಕಳವಾಗಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 23/2024 143, 147, 148, 323, 324, 504, 448, 354, 379 / 149 ಐಪಿಸಿಯಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಮಡಂತ್ಯಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಶ್ರೀ ಗುರುದೇವ ಮಠದ ಟ್ರಸ್ಟಿಗಳಾಗಿ ಕೆ. ಹರೀಶ್ ಕುಮಾರ್, ಸುಜಿತ ವಿ. ಬಂಗೇರ ಹಾಗೂ ನೂತನ ರಿಲಿಜಿಯಸ್ ಟ್ರಸ್ಟ್ ಗೆ 21 ಮಂದಿ ನೇಮಕ

Suddi Udaya

ಬಳಂಜ ಶಾಲೆಗೆ ಹಳೆವಿದ್ಯಾರ್ಥಿಗಳಿಂದ ಎರಡು ಟಿವಿ ಕೊಡುಗೆ

Suddi Udaya

ಎ.22: ನಾರಾವಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಚುನಾವಣಾ ಪ್ರಚಾರ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಆಟೋ ಚಾಲಕ ಆನಂದ ಗೌಡ ಹೃದಯಾಘಾತದಿಂದ ನಿಧನ

Suddi Udaya

ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ

Suddi Udaya
error: Content is protected !!