ಗ್ರಾಮಾಂತರ ಸುದ್ದಿಚಿತ್ರ ವರದಿ

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿ ಫೇ.23ರಂದು ಮಧ್ಯಾಹ್ನ ತಂಡಗಳ ಮಧ್ಯೆ ಹಲ್ಲೆ-ಪ್ರತಿ ಹಲ್ಲೆ ನಡೆದ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು-ಪ್ರತಿ ದೂರು ದಾಖಲಾದ ಬಗ್ಗೆ ವರದಿಯಾಗಿದೆ.

ಈ ಬಗ್ಗೆ ಠಾಣೆಗೆ ದೂರು ನೀಡಿದ ಕಳಿಯ ಗ್ರಾಮದ ನಿವಾಸಿ ಮಹಮ್ಮದ್ ರಮೀಜ್ (32) ಅವರು, ಶುಕ್ರವಾರ (ಫೆ 23) ಮಧ್ಯಾಹ್ನ ನ್ಯಾಯಾತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿಯಿದ್ದಾಗ ಪರಿಚಯದ ಆರೋಪಿ ಶಾಕೀರ್ ಎಂಬಾತ ಬಂದು ಹಲ್ಲೆ ನಡೆಸಿದ್ದು, ಆತನೊಂದಿಗೆ ಇದ್ದ ಇತರ ಆರೋಪಿಗಳಾದ ಜಾಬೀ‌ರ್, ಸಜ್ವಾನ್, ಸಿದ್ದಿಕ್, ನಾಸೀರ್, ರವೂಫ್ ಎಂಬವರುಗಳು ಕೂಡಾ ಹಲ್ಲೆ ನಡೆಸಿ ಅಲ್ಲಿಂದ ತೆರಳಿರುತ್ತಾರೆ. ನಂತರ ಭಾವನೊಂದಿಗೆ ಮನೆಗೆ ತೆರಳಿದಾಗ, ಅಲ್ಲಿಗೆ ಬಂದ ಆರೋಪಿಗಳು ಮನೆಗೆ ಬಂದು, ನನಗೆ ಹಾಗೂ ನನ್ನ ಪತ್ನಿಗೆ ಹಲ್ಲೆ ನಡೆಸಿರುತ್ತಾರೆ ಅಲ್ಲದೆ ಪತ್ನಿಯೊಂದಿಗೆ ಅನುಚಿತವಾಗಿ ವರ್ತಿಸಿ ಮನೆಯಲ್ಲಿದ್ದ ಕುರ್ಚಿಗಳಿಗೆ ಹಾನಿ ಮಾಡಿ ತೆರಳಿರುತ್ತಾರೆ. ಹಲ್ಲೆಯ ವೇಳೆ ಕಿಸೆಯಲ್ಲಿದ್ದ 12,600/- ರೂ. ಕಳವಾಗಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 23/2024 143, 147, 148, 323, 324, 504, 448, 354, 379 / 149 ಐಪಿಸಿಯಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ ಕ್ರೀಡಾ ಚಟುವಟಿಕೆಗಳಿಗೆ ಚಾಲನೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ಘಟಕದ ನೇತೃತ್ವದಲ್ಲಿ ಮಾತೃ ದೇವೋ ಭವ ಗೂಗಲ್ ಮೀಟ್ ಉಪನ್ಯಾಸ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ದೌರ್ಜನ್ಯ ಮಾಡಿದರೆ ಭಾರತೀಯ ಜನತಾ ಪಾರ್ಟಿ ಸುಮ್ಮನಿರುವುದಿಲ್ಲ: ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರದ ಅಸ್ತಿತ್ವಕ್ಕೆ ಕೊಡಲಿ ಏಟು ಕೊಡುವಂತಹ ಎಡಪಂತೀಯ ವಿಚಾರಧಾರೆಯ ಮಾನಸಿಕತೆಗೆ ಖಂಡನೆ: ಎಸ್.ಐ.ಟಿ ತನಿಖೆಯ ಹಂತದಲ್ಲಿ ಒಬ್ಬ ಜನಪ್ರತಿನಿಧಿಯಾಗಿ ತನಿಖೆಗೆ ತೊಂದರೆ ಆಗಬಾರದೆಂಬ ನಿಟ್ಟಿನಲ್ಲಿ ಯಾವುದೇ ಹೇಳಿಕೆಯನ್ನು ನೀಡಿರಲಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಹೇಳಿಕೆ

Suddi Udaya

ಜ್ಞಾನ ಪೀಠ ಪುರಸ್ಕೃತರು: ಉಪನ್ಯಾಸ ಮಾಲೆ ಕಾರ್ಯಕ್ರಮದ ಉದ್ಘಾಟನೆ

Suddi Udaya
error: Content is protected !!