30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಮ್ಮಾಜೆ ಫಾರ್ಮ್‌ನ ದೇವಿಪ್ರಸಾದ್‌ರಿಗೆ ಜಿಲ್ಲಾ ಮಟ್ಟದ ಸಾಧಕ ರೈತ ಪ್ರಶಸ್ತಿ

ಬೆಳ್ತಂಗಡಿ: ವಿಜಯ ಕರ್ನಾಟಕ ಪತ್ರಿಕೆ ಹಮ್ಮಿಕೊಂಡ 2023ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲೆಯ ಸಾಧಕ ರೈತರಿಗೆ ಪುರಸ್ಕಾರ ನೀಡುವ ಆರನೇ ವರ್ಷದ ‘ವಿಕ ಸೂಪರ್ ಸ್ಟಾರ್ ಜಿಲ್ಲಾ ಮಟ್ಟದ ಸಾಧಕ ರೈತ ಪ್ರಶಸ್ತಿ’ಯಿಂದ ಮೊಗ್ರು ಗ್ರಾಮದ ಕಡಮ್ಮಾಜೆ ಫಾರ್ಮ್‌ನ ದೇವಿಪ್ರಸಾದ್ ಅವರು ಪುರಸ್ಕೃತಗೊಂಡಿದ್ದಾರೆ.

ಫೆ.25ರಂದು ಒಡಿಯೂರು ಸಂಸ್ಥಾನದ ಶ್ರೀ ಗುರುದೇವ ಜ್ಞಾನ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಾಮೀಜಿಯವರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಎಚ್. ಕೆಂಪೇಗೌಡ, ಯೂನಿಯನ್ ಬ್ಯಾಂಕ್‌ನ ಡೆಪ್ಯೂಟಿ ರಿಜೀನಲ್ ಹೆಡ್ ವಿಶುಕುಮಾರ್, ವಿಜಯ ಕರ್ನಾಟಕದ ಆರ್‌ಎಂಡಿ ವಿಭಾಗದ ಸೀನಿಯರ್ ಮ್ಯಾನೇಜರ್ ನಾರಾಯಣ್, ರೆಸ್ಪಾನ್ಸ್ ವಿಭಾಗದ ಚೀಫ್ ಮ್ಯಾನೇಜರ್ ಅರವಿಂದ ಎಂ, ಒಡಿಯೂರು ವಿವಿದೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಎ. ಸುರೇಶ್ ರೈ, ವಿಜಯಕರ್ನಾಟಕ ಪತ್ರಿಕೆಯ ಸ್ಥಾನೀಯ ಸಂಪಾದಕ ಬಿ. ರವೀಂದ್ರ ಶೆಟ್ಟಿ, ಪ್ರಧಾನ ವರದಿಗಾರ ಸುಧಾಕರ ಸುವರ್ಣ ಹಾಗೂ ಮಹಮ್ಮದ್ ಆರಿಫ್ ಪಡುಬಿದ್ರಿ ಉಪಸ್ಥಿತರಿದ್ದರು.


ಮೊಗ್ರು ಗ್ರಾಮದ ಕಡಮ್ಮಾಜೆಯಲ್ಲಿ ದೇವಿಪ್ರಸಾದ್ ಅವರು ಹೊಂದಿರುವ ಕಡಮ್ಮಾಜೆ ಫಾರ್ಮ್‌ನ ಬಗ್ಗೆ ‘ಸುದ್ದಿ ಉದಯ ಪತ್ರಿಕೆ’ ಕಳೆದ ಜ.10ರಿಂದ ಜ.16ರ ಸಂಚಿಕೆಯಲ್ಲಿ ‘ಉದ್ಯೋಗಕ್ಕಾಗಿ ಕೃಷಿಯನ್ನೇ ನೆಚ್ಚಿಕೊಂಡ ಕಾನೂನು ಪದವೀಧರ ಸಮ್ಮಿಶ್ರ ಕೃಷಿ ಸಾಧಕನಿಗೆ ರಾಷ್ಟ್ರಮಟ್ಟದ ಅತ್ಯುತ್ತಮ ಕೃಷಿಕ ಪ್ರಶಸ್ತಿ’ ಎಂಬ ತಲೆಬರಹದಡಿ ಲೇಖನ ಪ್ರಕಟಿಸಿತ್ತು.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆಯ ವಾರ್ಷಿಕ ಮಹಾಸಭೆ

Suddi Udaya

ಕನ್ಯಾಡಿ 1: ಪ್ರಗತಿಪರ ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

Suddi Udaya

ನಾಲ್ಕೂರು: ಪಾಲೆದಡಿ ಸಂಕಪ್ಪ ಪೂಜಾರಿ ನಿಧನ

Suddi Udaya

ಎಕ್ಸೆಲ್‌ ಟೆಕ್ನೋ ಸ್ಕೂಲ್‌ಗೆ ಶೇ.100 ಫಲಿತಾಂಶ

Suddi Udaya

ಹರೀಶ್ ಪೂಂಜ ಗೆಲುವು: ಬೆಳಾಲಿನಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya
error: Content is protected !!