ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘ ನಿ, ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ನೂತನ ನಿರ್ದೇಶಕರ ಆಯ್ಕೆಗೆ ಮಾ.3 ರಂದು ಚುನಾವಣೆ ನಿಗದಿಯಾಗಿದ್ದು, ಚುನಾವಣೆ ನಡೆಯದೆ ಎಲ್ಲಾ ಸ್ಥಾನಗಳಿಗೆ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ 7ಸ್ಥಾನದಿಂದ ಕೆ. ಗೋಪಾಲ ರಾವ್, ದಿನೇಶ್ ಶೆಟ್ಟಿ, ಮಹಾವೀರ ಅರಿಗ, ತುಕರಾಮ ಬಿ, ಸಚಿನ್ ಕುಮಾರ್ ಎನ್, ಶರತ್ ಕುಮಾರ್, ಪರಿಶಿಷ್ಟ ಜಾತಿ ಮೀಸಲು ಸ್ಥಾನಕ್ಕೆ ಪ್ರಸಾದ್ ಬಿ, ಪರಿಶಿಷ್ಟ ಪಂಗಡ ಮೀಸಲು ಸ್ಥಾನಕ್ಕೆ ಸಂತೋಷ್ ಕುಮಾರ್, ಹಿಂದುಳಿದ ವರ್ಗ ಎ ಮೀಸಲು ಸ್ಥಾನಕ್ಕೆ ಬಿ.ಕೃಷ್ಣಪ್ಪ ಗುಡಿಗಾರ, ಹಿಂದುಳಿದ ವರ್ಗ ಬಿ ಮೀಸಲು ಸ್ಥಾನಕ್ಕೆ ಕೆ.ಎಸ್ ಆನಂದ ಶೆಟ್ಟಿ, ಮಹಿಳಾ ಮೀಸಲು ಸ್ಥಾನಕ್ಕೆ ಮಮತಾ ಎಂ. ಶೆಟ್ಟಿ, ವೀಣಾ ವಿ. ಕುಮಾರ್ ಆಯ್ಕೆಯಾಗಿದ್ದಾರೆ.

ರಿಟರ್ನಿಂಗ್ ಅಧಿಕಾರಿ ಬಿ. ಪ್ರತಿಮಾ ಚುನಾವಣಾ ಪ್ರಕ್ರಿಯೆಯನ್ನು ನಡೆಸಿದ್ದರು.

Leave a Comment

error: Content is protected !!