April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರು ಸೇರಿದಂತೆ ಕರ್ನಾಟಕ ರಾಜ್ಯದ ಉಡುಪಿ, ಉತ್ತರಕನ್ನಡ, ಚಾಮರಾಜನಗರದಿಂದ ಒಟ್ಟು 35 ಮಂದಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ ದೊರಕಿದ್ದು, ದೆಹಲಿಗೆ ತೆರಳಲಿದ್ದಾರೆ.

ಇವರಲ್ಲಿ ಆದಿವಾಸಿ ಮಹಿಳೆ ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಲಕ್ಷ್ಮಿರವರಿಗೆ ದೆಹಲಿಯ ವಿಮಾನವೇರುವ ಭಾಗ್ಯ ಒದಗಿಬಂದಿದೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಯೋಜನೆ ಇದಾಗಿದ್ದು, ಸಂಜೀವಿನಿ’- ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಮಾರ್ಗದರ್ಶನದಲ್ಲಿ ಅನುಷ್ಠಾನಗೊಳ್ಳಲಿದೆ. ಮಾ.1 ರಂದು ರಾಷ್ಟ್ರಪತಿಗಳ ಭೇಟಿ ಹಾಗೂ ಅಮೃತ್ ಉದ್ಯಾನವನಕ್ಕೆ ಭೇಟಿ ನೀಡಲು ಅವಕಾಶ ದೊರೆಯಲಿದೆ.

ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಲಕ್ಷ್ಮಿ ಅವರು ನಿಸರ್ಗ ಸ್ವಸಹಾಯ ಗುಂಪಿನ ಸದಸ್ಯೆಯಾಗಿದ್ದು, ತ್ರಿವೇಣಿ ಸಂಜೀವಿನಿ ಒಕ್ಕೂಟದ ಸದಸ್ಯೆ. ತನ್ನ ತಾಯಿ ತಯಾರಿಸುವ ಬುಟ್ಟಿ ಸಹಿತ ಕರಕುಶಲ ಸಾಮಗ್ರಿಗಳನ್ನು ಮಾರಾಟ ಮಾಡುವ ಕಾಯಕ ಮಾಡುತ್ತಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆ

Suddi Udaya

ಜ.24 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಪ್ರಾರಂಭ

Suddi Udaya

ಚಾರ್ಮಾಡಿ ಮಠದಮಜಲು ಹತ್ತಿರ ಇಂದ್ ಮರವನ್ನು ದೂಡಿ ಹಾಕಿದ ಆನೆ ವಿದ್ಯುತ್ ಫೀಡರ್ ಗೆ ಹಾನಿ: ದುರಸ್ತಿ ಪಡಿಸಿದ ಮೆಸ್ಕಾಂ ಇಲಾಖೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕರ ಸಭೆ

Suddi Udaya
error: Content is protected !!