September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರು ಸೇರಿದಂತೆ ಕರ್ನಾಟಕ ರಾಜ್ಯದ ಉಡುಪಿ, ಉತ್ತರಕನ್ನಡ, ಚಾಮರಾಜನಗರದಿಂದ ಒಟ್ಟು 35 ಮಂದಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ ದೊರಕಿದ್ದು, ದೆಹಲಿಗೆ ತೆರಳಲಿದ್ದಾರೆ.

ಇವರಲ್ಲಿ ಆದಿವಾಸಿ ಮಹಿಳೆ ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಲಕ್ಷ್ಮಿರವರಿಗೆ ದೆಹಲಿಯ ವಿಮಾನವೇರುವ ಭಾಗ್ಯ ಒದಗಿಬಂದಿದೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಯೋಜನೆ ಇದಾಗಿದ್ದು, ಸಂಜೀವಿನಿ’- ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಮಾರ್ಗದರ್ಶನದಲ್ಲಿ ಅನುಷ್ಠಾನಗೊಳ್ಳಲಿದೆ. ಮಾ.1 ರಂದು ರಾಷ್ಟ್ರಪತಿಗಳ ಭೇಟಿ ಹಾಗೂ ಅಮೃತ್ ಉದ್ಯಾನವನಕ್ಕೆ ಭೇಟಿ ನೀಡಲು ಅವಕಾಶ ದೊರೆಯಲಿದೆ.

ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಲಕ್ಷ್ಮಿ ಅವರು ನಿಸರ್ಗ ಸ್ವಸಹಾಯ ಗುಂಪಿನ ಸದಸ್ಯೆಯಾಗಿದ್ದು, ತ್ರಿವೇಣಿ ಸಂಜೀವಿನಿ ಒಕ್ಕೂಟದ ಸದಸ್ಯೆ. ತನ್ನ ತಾಯಿ ತಯಾರಿಸುವ ಬುಟ್ಟಿ ಸಹಿತ ಕರಕುಶಲ ಸಾಮಗ್ರಿಗಳನ್ನು ಮಾರಾಟ ಮಾಡುವ ಕಾಯಕ ಮಾಡುತ್ತಿದ್ದಾರೆ.

Related posts

ಆ.15: ಉಜಿರೆಯಲ್ಲಿ ಅಗ್ರಿಲೀಫ್ ಉದ್ಯೋಗ ಮೇಳ-2026

Suddi Udaya

ಎಸ್ ಡಿ ಎಮ್ ಬೆಳ್ತಂಗಡಿ ಶಾಲೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರ ಭೇಟಿ

Suddi Udaya

ನದಿಗೆ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

Suddi Udaya

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಹಸoಚಾಲಕರಾಗಿ ಪ್ರಸನ್ನ ದರ್ಬೆ ಆಯ್ಕೆ

Suddi Udaya

ಹರಿದಾಸ ಗಾಂಭೀರ ಅವರಿಗೆ ನರೇಂದ್ರ ಕುಮಾರ್ ಸಂಸ್ಮರಣಾ ಪ್ರಶಸ್ತಿ

Suddi Udaya

ಬಂದಾರು ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಂದ ದಾಳಿ: ಸುಮಾರು 48 ಟನ್ ನಷ್ಟು ಅಕ್ರಮ ಮರಳು ವಶ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!