25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರು ಸೇರಿದಂತೆ ಕರ್ನಾಟಕ ರಾಜ್ಯದ ಉಡುಪಿ, ಉತ್ತರಕನ್ನಡ, ಚಾಮರಾಜನಗರದಿಂದ ಒಟ್ಟು 35 ಮಂದಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ ದೊರಕಿದ್ದು, ದೆಹಲಿಗೆ ತೆರಳಲಿದ್ದಾರೆ.

ಇವರಲ್ಲಿ ಆದಿವಾಸಿ ಮಹಿಳೆ ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಲಕ್ಷ್ಮಿರವರಿಗೆ ದೆಹಲಿಯ ವಿಮಾನವೇರುವ ಭಾಗ್ಯ ಒದಗಿಬಂದಿದೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಯೋಜನೆ ಇದಾಗಿದ್ದು, ಸಂಜೀವಿನಿ’- ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಮಾರ್ಗದರ್ಶನದಲ್ಲಿ ಅನುಷ್ಠಾನಗೊಳ್ಳಲಿದೆ. ಮಾ.1 ರಂದು ರಾಷ್ಟ್ರಪತಿಗಳ ಭೇಟಿ ಹಾಗೂ ಅಮೃತ್ ಉದ್ಯಾನವನಕ್ಕೆ ಭೇಟಿ ನೀಡಲು ಅವಕಾಶ ದೊರೆಯಲಿದೆ.

ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಲಕ್ಷ್ಮಿ ಅವರು ನಿಸರ್ಗ ಸ್ವಸಹಾಯ ಗುಂಪಿನ ಸದಸ್ಯೆಯಾಗಿದ್ದು, ತ್ರಿವೇಣಿ ಸಂಜೀವಿನಿ ಒಕ್ಕೂಟದ ಸದಸ್ಯೆ. ತನ್ನ ತಾಯಿ ತಯಾರಿಸುವ ಬುಟ್ಟಿ ಸಹಿತ ಕರಕುಶಲ ಸಾಮಗ್ರಿಗಳನ್ನು ಮಾರಾಟ ಮಾಡುವ ಕಾಯಕ ಮಾಡುತ್ತಿದ್ದಾರೆ.

Related posts

ಮಾಲಾಡಿ ನವುಂಡ ಪರಿಸರದಲ್ಲಿ ಎರಡು ಚಿರತೆಗಳು ಪತ್ತೆ: ನಾಯಿಯ ಮೇಲೆ ದಾಳಿ: ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಪಾರೆಂಕಿಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿತ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

Suddi Udaya

ಅ.20 ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

Suddi Udaya

ಬಳಂಜ ಬೋಂಟ್ರೊಟ್ಟುಗುತ್ತು ದೈವಸ್ಥಾನಕ್ಕೆ ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ವಿಧಾನಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕರಿಂದ ಉಗ್ರಾಣದ ಉದ್ಘಾಟನೆ

Suddi Udaya

ವೇಣೂರು ಮಹಾಮಸ್ತಕಾಭಿಷೇಕ: ಡಿ. 17 ರಂದು ಬೃಹತ್ ವೈದ್ಯಕೀಯ ಶಿಬಿರ

Suddi Udaya
error: Content is protected !!