April 11, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

ಲಾಯಿಲ: ಅಲ್ ಬುಖಾರಿ ಜುಮಾ ಮಸೀದಿ ಕುಂಟಿನಿ ಇದರ ವಾರ್ಷಿಕ ಮಹಾ ಸಭೆಯು ಫೆ.26ರಂದು ಮಗರಿಬ್ ನಮಾಜ್ ಬಳಿಕ ಮದರಸ ಹಾಲ್ ನಲ್ಲಿ ಕೇಂದ್ರ ಕಮಿಟಿ ಅಧ್ಯಕ್ಷ ಬಿಎಮ್ ಅಬ್ದುಲ್ ಹಮೀದ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕೇಂದ್ರ ಸಮಿತಿಯ ಕಾರ್ಯದರ್ಶಿಗಳಾದ ಮೊಹಮ್ಮದ್ ಕೆಎಸ್ಆರ್ ಟಿಸಿ ಉಪಸ್ಥಿತರಿದ್ದರು. ಇಬ್ರಾಹಿಂ ಉಸ್ತಾದ್ ಅವರು ದುವಾ ಕಾರ್ಯಕ್ರಮ ನೆರವೇರಿಸಿ, ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಸಾಹುಲ್ ಹಮೀದ್ ರವರು ವಾಚಿಸಿದರು. ಹಳೆ ಕಮಿಟಿಯನ್ನು ಬರ್ಕಾಸುಗೊಳಿಸಿ ಹೊಸ ಕಮಿಟಿಯನ್ನು ರಚಿಸಲಾಯಿತು.

ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಪ್ರಧಾನ ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್, ಉಪಾಧ್ಯಕ್ಷರಾಗಿ ಸುಲೈಮಾನ್ ಎ.ಪಿ., ಇಲ್ಯಾಸ್ ನಾಡ್ಜೆ, ಕೋಶಾಧಿಕಾರಿಯಾಗಿ ರಹೀಮ್ ಪುನರಾಯ್ಕೆಗೊಂಡರು.

ಸದಸ್ಯರುಗಳಾಗಿ ಸಲಿಮ್, ರಹೀಮ್ ಯು.ಕೆ, ಅಝೀಜ್ ಯು.ಕೆ, ಅಬುಸಲಿ ಎನ್.ಆರ್., ರಹಿಮಾನ್, ಇಸುಬು ಹಲೇಜಿ ಮಯ್ಯದ್ದಿ , ಅಶ್ರಫ್ , ಅಶ್ರಫ್ ಮೋನು, ಸಂಸುಂದ್ದಿನ್ ನಾಡ್ಜೆ, ಹನೀಫ್ , ಮುಸ್ತಫಾ , ಹಸನ್ , ಆಸೀಫ್ , ಆನ್ಸರ್ ಯು ಪಿ. ಆಯ್ಕೆಗೊಂಡರು.


ನೂತನ ಮದರಸದ ಕೆಲಸ ಕಾರ್ಯಗಳು ಆದಷ್ಟು ಬೇಗ ಪೂರ್ತಿಗೊಳಿಸಲು ದಾನಿಗಳ ಸಹಕಾರ ಕೇಳುವುದೆಂದು ತೀರ್ಮಾನಿಸಿ ಆದಷ್ಟು ಬೇಗ ಮದರಸ ಪೂರ್ತಿ ಗೊಳಿಸುವ ಪ್ರಯತ್ನ ಮಾಡುವುದೆಂದು ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಯಂಗ್ ಮೆನ್ಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆ

Suddi Udaya

ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆ: ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ

Suddi Udaya

ಹೊಸಂಗಡಿ: ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗದ ನಿರ್ವಹಣೆ ಕುರಿತು ತರಬೇತಿ

Suddi Udaya

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ಕಕ್ಕಿಂಜೆ : ಕೃಷಿಕ ಗೋಕುಲ್ ದಾಸ್ ಭಟ್ ನಿಧನ

Suddi Udaya

ಲಾಯಿಲ: ಕರ್ನೊಡಿ ಜಯ ಶೆಟ್ಟಿ ನಿಧನ

Suddi Udaya
error: Content is protected !!