25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಯುವ ಮತದಾರರೊಂದಿಗೆ ಸಂವಾದ

ಉಜಿರೆ : ಭಾರತ ಚುನಾವಣಾ ಆಯೋಗ , ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ನೆಹರು ಯುವ ಕೇಂದ್ರ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಫೆ.24 ರಂದು ಎಸ್.ಡಿ.ಎಂ (MSW) ಪಿಜಿ ಕಾಲೇಜಿನಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಯುವ ಮತದಾರರೊಂದಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಜಿಲ್ಲಾ ಸಂಪನ್ಮೂಲ ವ್ಯಕ್ತಿ(DLMT) ಯೋಗೇಶ ಹೆಚ್.ಆರ್, ಯುವ ಮತದಾರರಿಗೆ ಪ್ರತೀ ಬಾರಿ ಚುನಾವಣೆಯಲ್ಲಿ ಮರೆಯದೇ ಮತದಾನ ಮಾಡಿ ಪ್ರಜಾಪ್ರಭುತ್ವದ ಯಜಮಾನರಾಗಿ ಎಂದು ಕರೆಕೊಟ್ಟರು. ಭವಿಷ್ಯದ ಮತದಾರರು ಹಾಗೂ ಯುವ ಮತದಾರರು VHA App ಡೌನ್ಲೋಡ್ ಮಾಡಿಕೊಂಡು ಅಥವಾ ceokarnataka.gov.in ವೆಬ್ಸೈಟ್ನಲ್ಲಿ ಲಾಗಿನ್ ಆಗಿ
ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಹಾಗೂ ತಮ್ಮ ಕುಟುಂಬದ ಸದಸ್ಯರ ಹೆಸರಿರುವುದನ್ನು ಖಚಿತಪಡಿಸಿಕೊಂಡು ಯಾವುದೇ ಆಮಿಷಗಳಿಗೆ ಬಲಿಯಾಗದೆ ಈ ಬಾರಿಯ ಮತದಾನದಲ್ಲಿ ತಪ್ಪದೇ ಭಾಗವಹಿಸುವ ಮೂಲಕ ಚುನಾವಣಾ ಪರ್ವ ಭಾರತದ ಗರ್ವ ಎಂಬ ಘೋಷ ವಾಕ್ಯವನ್ನು ಸಾಬೀತು ಪಡಿಸಲು ತಿಳಿಸಿದರು.

ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಸ್ವೀಪ್ ಸಮಿತಿಯ ಸಹಾಯಕ ನೋಡಲ್ ಅಧಿಕಾರಿ ತೇಜಾಕ್ಷಿ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಎಸ್.ಡಿ.ಎಮ್ ಕಾಲೇಜಿನ ಡೀನ್ ಆದ ಡಾ.ವಿಶ್ವನಾಥ್ , ಹೆಚ್.ಒಡಿ ಡಾ.ರವಿಶಂಕರ್, ಸ್ವೀಪ್ ಸಮಿತಿ ಸದಸ್ಯರಾದ ಡೊಂಬಯ್ಯ ಇಡ್ಕಿದು, ನೆಹರು ಕೇಂದ್ರ ಮಂಗಳೂರು ಇದರ ತಾ.ಸಂಯೋಜಕರಾದ , ಶಾಂತಪ್ಪ ಕರಪತ್ರ ಬಿಡುಗಡೆ ಮಾಡಿದರು. ತಾಲೂಕು ಸಂಪನ್ಮೂಲ ವ್ಯಕ್ತಿಗಳಾದ (TLMT) ಶುಭಾ ಕೆ, ಹಾಗೂ ದಿವ್ಯಾ ಕುಮಾರಿ ಯುವ ಮತದಾರರ ಅಭಿಪ್ರಾಯ ಆಲಿಸಿ, ತಪ್ಪದೇ ಮತದಾನದಲ್ಲಿ ಭಾಗವಹಿಸುವ ಜೊತೆಗೆ ಇತರರನ್ನು ಮತದಾನದಲ್ಲಿ ಭಾಗವಹಿಸುವಂತೆ ಮಾಡುವಲ್ಲಿ ರಾಯಭಾರಿಗಳಾಗಿ ಕೆಲಸ ಮಾಡುವಂತೆ ತಿಳಿಸಿದರು.

Related posts

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಭಾರೀ ಗಾಳಿ ಮಳೆ: ತಾಲೂಕಿನದ್ಯಾಂತ ಹಲವು ಮನೆಗಳಿಗೆ ಮರ ಬಿದ್ದು ಹಾನಿ

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಳೆ ವಿದ್ಯಾರ್ಥಿಗಳಿಂದ ಮಕ್ಕಳಿಗೆ ಐಡಿ ಕಾರ್ಡ್ ಮತ್ತು ಪ್ರೋತ್ಸಾಹ ಧನ ವಿತರಣೆ

Suddi Udaya

ನಿಡ್ಲೆ :ಅಸ್ತಿ ಮಜ್ಜೆ ಶಸ್ತ್ರಚಿಕಿತ್ಸೆ ನೆರವು

Suddi Udaya

ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ, ಅಕ್ಕಮ್ಮ ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಪಂದ್ಯಾಟದಲ್ಲಿ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡಕ್ಕೆ ತೃತೀಯ ಪ್ರಶಸ್ತಿ

Suddi Udaya
error: Content is protected !!