ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಅಪೂರ್ವ ಸಮಾಗಮ “ಸ್ನೇಹ ಸಮ್ಮಿಲನ”

ವೇಣೂರು : ಸರಕಾರಿ ಪದವಿ ಪೂರ್ವ ಕಾಲೇಜು ವೇಣೂರು ಇಲ್ಲಿನ 2000- 2001 ನೇ ಸಾಲಿನಲ್ಲಿ ಪಿಯುಸಿ ವ್ಯಾಸಂಗ ಮಾಡಿದ ಹಳೆ ವಿದ್ಯಾರ್ಥಿಗಳ ಅಪೂರ್ವ ಸಮಾಗಮ “ಸ್ನೇಹ ಸಮ್ಮಿಲನ” ವೇಣೂರು ಬಾಹುಬಲಿ ಮಹಾಸ್ವಾಮಿಯ ಮಹಾಮಸ್ತಕಾಭಿಷೇಕದ ಸುಸಂದರ್ಭದಲ್ಲಿ ಫೆ.25 ರಂದು ವೇಣೂರು ಕಾಲೇಜಿನಲ್ಲಿ ಜರುಗಿತು.


24 ಜನ ಹಳೆ ವಿದ್ಯಾರ್ಥಿಗಳು ಬೇರೆ ಬೇರೆ ಊರಿನಲ್ಲಿ ನೆಲೆಸಿದ್ದರೂ ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿದರು. 23 ವರ್ಷಗಳ ನಂತರ ನಡೆದ ಅಪೂರ್ವ ಸಮಾಗಮದಲ್ಲಿ ಎಲ್ಲರೂ ಧನ್ಯತೆಯಿಂದ ಪರಸ್ಪರ ಮನತುಂಬಿ ಅದೇ ಹಿಂದಿನ ಭಾಂದವ್ಯದಿಂದ ಮಾತಾಡಿ ಉಭಯ ಕುಶಲೋಪಹಾರಿ ವಿಚಾರಿಸಿದರು. ತಾವು ವ್ಯಾಸಂಗ ಮಾಡಿದ ವಿದ್ಯಾ ದೇಗುಲವಾದ ವೇಣೂರು ಪದವಿ ಪೂರ್ವ ಕಾಲೇಜಿಗೆ ಕೊಡುಗೆಯನ್ನು ನೀಡುವ ಬಗ್ಗೆ ಸಮಾರಂಭದಲ್ಲಿ ಚರ್ಚಿಸಿ ನಿರ್ಣಯಿಸಲಾಯಿತು.


ಸಮಾರಂಭದಲ್ಲಿ ಭಾಗವಹಿಸಿದ ಎಲ್ಲಾ ಹಳೇ ವಿದ್ಯಾರ್ಥಿಗಳು ತಮ್ಮ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ದೂರದ ಕಾಸರಗೋಡಿನ ಬದಿಯಡ್ಕ, ಕುಂಬ್ಳೆ, ಬೆಂಗಳೂರು, ಮಂಗಳೂರು, ಬಂಟ್ವಾಳ ಪುತ್ತೂರು ಕಾರ್ಕಳ ಮೂಡಬಿದ್ರಿ ಮುಂತಾದ ಕಡೆಗಳಿಂದ ಹಳೆ ವಿದ್ಯಾರ್ಥಿಗಳು ಆಗಮಿಸಿ ಶುಭ ಹಾರೈಸಿದರು.


ಸಮಾರಂಭ ನಡೆಸಲು ಅವಕಾಶ ಮಾಡಿಕೊಟ್ಟ ವೇಣೂರು ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಿಗೆ, ಉಪನ್ಯಾಸಕ ವೃಂದದವರಿಗೆ ಕೃತಜ್ಞತೆಯನ್ನು ಸಲ್ಲಿಸಲಾಯಿತು.
ಅತ್ಯಂತ ಸರಳ ಸಮಾರಂಭವನ್ನು ಹಳೆ ವಿದ್ಯಾರ್ಥಿಯಾಗಿರುವ ಶ್ರೀಮತಿ ಕುಶಲತಾ ಪ್ರಾರ್ಥಿಸಿ, ನವೀನ್ ಪೂಜಾರಿ ಪಚ್ಚೇರಿ ಸ್ವಾಗತಿಸಿದರು. ಜಗನ್ನಾಥ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ವೀಣಾ ಎಸ್ ಹೆಗ್ಡೆ ಧನ್ಯವಾದ ಸಮರ್ಪಿಸಿದರು.

Related posts

ಮೊಗ್ರು: ರೂ.240ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಏತ ನೀರಾವರಿ ಯೋಜನೆ: ಶಾಸಕ ಹರೀಶ್ ಪೂಂಜರಿಂದ ಕಾಮಗಾರಿ ಪರಿಶೀಲನೆ

Suddi Udaya

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ನಡೆಯುವ ಯೋಗ ರತ್ನ ಪ್ರಶಸ್ತಿಗೆ ಕು| ಚಿನ್ಮಯಿ. ಹೆಚ್, ಆಯ್ಕೆ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಫೆ.12: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆ

Suddi Udaya

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ

Suddi Udaya

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

Suddi Udaya
error: Content is protected !!