25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಅಪೂರ್ವ ಸಮಾಗಮ “ಸ್ನೇಹ ಸಮ್ಮಿಲನ”

ವೇಣೂರು : ಸರಕಾರಿ ಪದವಿ ಪೂರ್ವ ಕಾಲೇಜು ವೇಣೂರು ಇಲ್ಲಿನ 2000- 2001 ನೇ ಸಾಲಿನಲ್ಲಿ ಪಿಯುಸಿ ವ್ಯಾಸಂಗ ಮಾಡಿದ ಹಳೆ ವಿದ್ಯಾರ್ಥಿಗಳ ಅಪೂರ್ವ ಸಮಾಗಮ “ಸ್ನೇಹ ಸಮ್ಮಿಲನ” ವೇಣೂರು ಬಾಹುಬಲಿ ಮಹಾಸ್ವಾಮಿಯ ಮಹಾಮಸ್ತಕಾಭಿಷೇಕದ ಸುಸಂದರ್ಭದಲ್ಲಿ ಫೆ.25 ರಂದು ವೇಣೂರು ಕಾಲೇಜಿನಲ್ಲಿ ಜರುಗಿತು.


24 ಜನ ಹಳೆ ವಿದ್ಯಾರ್ಥಿಗಳು ಬೇರೆ ಬೇರೆ ಊರಿನಲ್ಲಿ ನೆಲೆಸಿದ್ದರೂ ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿದರು. 23 ವರ್ಷಗಳ ನಂತರ ನಡೆದ ಅಪೂರ್ವ ಸಮಾಗಮದಲ್ಲಿ ಎಲ್ಲರೂ ಧನ್ಯತೆಯಿಂದ ಪರಸ್ಪರ ಮನತುಂಬಿ ಅದೇ ಹಿಂದಿನ ಭಾಂದವ್ಯದಿಂದ ಮಾತಾಡಿ ಉಭಯ ಕುಶಲೋಪಹಾರಿ ವಿಚಾರಿಸಿದರು. ತಾವು ವ್ಯಾಸಂಗ ಮಾಡಿದ ವಿದ್ಯಾ ದೇಗುಲವಾದ ವೇಣೂರು ಪದವಿ ಪೂರ್ವ ಕಾಲೇಜಿಗೆ ಕೊಡುಗೆಯನ್ನು ನೀಡುವ ಬಗ್ಗೆ ಸಮಾರಂಭದಲ್ಲಿ ಚರ್ಚಿಸಿ ನಿರ್ಣಯಿಸಲಾಯಿತು.


ಸಮಾರಂಭದಲ್ಲಿ ಭಾಗವಹಿಸಿದ ಎಲ್ಲಾ ಹಳೇ ವಿದ್ಯಾರ್ಥಿಗಳು ತಮ್ಮ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ದೂರದ ಕಾಸರಗೋಡಿನ ಬದಿಯಡ್ಕ, ಕುಂಬ್ಳೆ, ಬೆಂಗಳೂರು, ಮಂಗಳೂರು, ಬಂಟ್ವಾಳ ಪುತ್ತೂರು ಕಾರ್ಕಳ ಮೂಡಬಿದ್ರಿ ಮುಂತಾದ ಕಡೆಗಳಿಂದ ಹಳೆ ವಿದ್ಯಾರ್ಥಿಗಳು ಆಗಮಿಸಿ ಶುಭ ಹಾರೈಸಿದರು.


ಸಮಾರಂಭ ನಡೆಸಲು ಅವಕಾಶ ಮಾಡಿಕೊಟ್ಟ ವೇಣೂರು ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಿಗೆ, ಉಪನ್ಯಾಸಕ ವೃಂದದವರಿಗೆ ಕೃತಜ್ಞತೆಯನ್ನು ಸಲ್ಲಿಸಲಾಯಿತು.
ಅತ್ಯಂತ ಸರಳ ಸಮಾರಂಭವನ್ನು ಹಳೆ ವಿದ್ಯಾರ್ಥಿಯಾಗಿರುವ ಶ್ರೀಮತಿ ಕುಶಲತಾ ಪ್ರಾರ್ಥಿಸಿ, ನವೀನ್ ಪೂಜಾರಿ ಪಚ್ಚೇರಿ ಸ್ವಾಗತಿಸಿದರು. ಜಗನ್ನಾಥ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ವೀಣಾ ಎಸ್ ಹೆಗ್ಡೆ ಧನ್ಯವಾದ ಸಮರ್ಪಿಸಿದರು.

Related posts

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ:

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭ ನಾರಾಯಣ ಗೌಡ ನೇಮಕ.

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

Suddi Udaya

ಸೆ.7: ಬರೆಂಗಾಯ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ; ಸತತ ಮೂರನೇ ಅವಧಿಗೆ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಸುಂದರ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಪೂಜಾರಿ ಅವಿರೋಧ ಆಯ್ಕೆ

Suddi Udaya
error: Content is protected !!