July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು ಇದರ 25ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

ಧರ್ಮಸ್ಥಳ : ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು ಧರ್ಮಸ್ಥಳ ಇದರ25ನೇ ವರ್ಷದ ವಾರ್ಷಿಕೋತ್ಸವದ
ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಧರ್ಮಸ್ಥಳದ ಶ್ರೀ ಹರ್ಷೇಂದ್ರ ಕುಮಾರ್ ಅವರು ಇಂದಿನ ಯುವಪೀಳಿಗೆ ವಿದ್ಯಾವಂತರಾಗಿದ್ದಾರೆ. ವಿಚಾರವಂತರಾಗಿದ್ದಾರೆ. ಆದರೇ ಆಚಾರವಂತರಾಗಬೇಕಾದರೆ ಇಂತಹ ಭಜನಾಮಂದಿರಗಳು ಅವಶ್ಯಕ ಎಂದರು.

ಹಾಗೆಯೇ ಹಿಂದೂಧರ್ಮದ ಸಂಕೇತವಾದ ಹಣೆಬೊಟ್ಟು, ತಿಲಕ ಹಚ್ಚಿಕೊಳ್ಳುವಲ್ಲಿ ಸಂಕೋಚ ತರವಲ್ಲ, ಅದನ್ನು ಧೈರ್ಯದಿಂದ ಧರಿಸಬೇಕು ಎಂದು ಕಿವಿಮಾತು ಹೇಳಿದರು. ನಮ್ಮ ಧಾರ್ಮಿಕ ಸ್ಥಳಗಳನ್ನು ಆರಾಧಿಸುವುದು ಮಾತ್ರವಲ್ಲ, ಅನುಭವಿಸಬೇಕು ಎಂದು ನುಡಿದ ಅವರು ಭಜನಾಮಂದಿರದ ಏಳಿಗೆಗಾಗಿ ದುಡಿದ ಇಡೀ ಮುಳಿಕ್ಕಾರು ಜನರನ್ನು ತುಂಬುಹೃದಯದಿಂದ ಪ್ರಶಂಸಿಸಿದರು.


ದಿಕ್ಸೂಚಿ ಭಾಷಣಕಾರರಾಗಿ ಆಗಮಿಸಿದ್ದ ಕುಮಾರಿ ಹಾರಿಕಾ ಮಂಜುನಾಥ್ ಭಜನೆಯ ಮಹತ್ವ ಮತ್ತು ಯುವಪೀಳಿಗೆಯ ಜವಾಬ್ದಾರಿಯ ಬಗ್ಗೆ ತುಂಬಾ ಸ್ಪುಟವಾಗಿ ಮಾತನಾಡುತ್ತಾ, ಅಯೋಧ್ಯೆ ರಾಮಮಂದಿರ ನಿರ್ಮಾಣವಾಗಿದೆ. ರಾಮರಾಜ್ಯ ನಿರ್ಮಾಣವಾಗಬೇಕಾದರೆ ಪ್ರತಿಯೊಂದು ಮನೆಯೂ ಅಯೋದ್ಯೆಯಾಗಬೇಕು ಎಂದರು. ಹಿಂದೂ ಧರ್ಮದ ಉಳಿವಿನಲ್ಲಿ ತಾಯಂದಿರ ಪಾತ್ರವನ್ನು ಮಹಾಭಾರತದ ಕಥೆಯ ಮೂಲಕ ಅದ್ಭುತವಾಗಿ ವಿವರಿಸಿದರು.ಸಂಸ್ಕೃತ ಶ್ಲೋಕಗಳ ಜೊತೆಗೆ ಧರ್ಮದ ಬಗ್ಗೆ ನಿರರ್ಗಳವಾಗಿ ಧಾರ್ಮಿಕ ಭಾಷಣ ಮಾಡಿದ ಹಾರಿಕಾ ಅವರು ನೆರೆದಿದ್ದ ಜನರನ್ನು ಮಂತ್ರಮುಗ್ಧರನ್ನಾಗಿಸಿದರು.


ತಾಲೂಕು ಬಿಜೆಪಿ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪಿ ಶ್ರೀನಿವಾಸ್ ರಾವ್ ಅವರು ಮಾತನಾಡಿ ಮುಳಿಕ್ಕಾರಿನ ಭಜನಾಮಂದಿರ ನಿರ್ಮಾಣದ ಹಿಂದಿದ್ದ ಕಷ್ಟಗಳು, ಹಿರಿಯರ ತ್ಯಾಗಗಳನ್ನು ನೆನೆದು ಯಶಸ್ವಿ ಕಾರ್ಯಕ್ರಮದ ಆಯೋಜನೆಗಾಗಿ ಮಂಡಳಿಯ ಪದಾಧಿಕಾರಿಗಳನ್ನು ಅಭಿನಂದಿಸಿದರು.


ಸಭೆಯ ಅಧ್ಯಕ್ಷತೆಯನ್ನು ಭಜನಾ ಮಂಡಳಿಯ ಗೌರವಾಧ್ಯಕ್ಷ ಧನಕೀರ್ತಿ ಅರಿಗ ವಹಿಸಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ  ವಿಮಲಾ ಪರಮೇಶ್ವರ್ ,ಧರ್ಮಸ್ಥಳ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಪ್ರೀತಮ್. ಡಿ,ಗ್ರಾಮ ಪಂಚಾಯತ್ ಸದಸ್ಯರಾದ ಹರ್ಷಿತ್ ಜೈನ್ ,ಮುರಳಿದರ ದಾಸ್, ಶ್ರೀಮತಿ ದಯಾಳಿನಿ, ಭಜನಾ ಮಂಡಳಿ ಸ್ಥಾಪಕ ಅಧ್ಯಕ್ಷ ವೀರಪ್ಪ ಮಲೆಕುಡಿಯ ,ಭಜನಾ ಮಂಡಳಿಯ ಅಧ್ಯಕ್ಷ ಯೋಗೇಶ್ ಗೌಡ ಉಪಸ್ಥಿತರಿದ್ದರು.

Related posts

ಎಂ.ಡಿ.ಎಸ್ ಪರೀಕ್ಷೆ: ರಾಜ್ಯಮಟ್ಟದಲ್ಲಿ ವೇಣೂರಿನ ಡಾ. ದೀಕ್ಷಾ ಅಶ್ವಿತ್‌ ಕುಲಾಲ್ ರವರಿಗೆ 5ನೇ ರ್‍ಯಾಂಕ್

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ಧನಂಜಯ ಗೌಡ , ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಆಯ್ಕೆ

Suddi Udaya

6ನೇ ಏಷ್ಯನ್ ಯೋಗಾಸನ ಚಾಂಪಿಯನ್‌ಶಿಪ್ 2025 : ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಆಹ್ವಾನ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರಾದ ರಂಜನ್ ಜಿ. ಗೌಡ ಮತ್ತು ಅಭಿನಂದನ್ ಹರೀಶ್ ಕುಮಾರ್

Suddi Udaya

ಆಟೋ ಚಾಲಕರ ಹಾಗೂ ಸಾರಿಗೆ ನೌಕರರ ಭವಿಷ್ಯದ ಭದ್ರತೆಗಾಗಿ ಯೋಜನೆಗಳನ್ನು ರೂಪಿಸುವಂತೆ ಬಿಎಂಎಸ್ ನ ವೆಹಿಕಲ್ ಯೂನಿಯನ್ ಸಂಘಗಳಿಂದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರಿಗೆ ಮನವಿ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya
error: Content is protected !!